Advertisement

ಬೆಂಗಳೂರು ಪೊಲೀಸರಿಂದ ಕುಖ್ಯಾತ ದರೋಡೆಕೋರರಿಬ್ಬರ ಕಾಲಿಗೆ ಗುಂಡು

12:31 PM Nov 11, 2018 | |

ಬೆಂಗಳೂರು: ಒಂಟಿ ಚಾಲಕರು,ಬೈಕ್‌ ಸವಾರರನ್ನು ಅಡ್ಡಗಟ್ಟಿ ದರೋಡೆ ನಡೆಸುತ್ತಿದ್ದ ಕುಖ್ಯಾತ ದರೋಡೆಕೋರರಿಬ್ಬರ ಮೇಲೆ ಭಾನುವಾರ ನಸುಕಿನ ವೇಳೆ ಪೊಲೀಸರು ಫೈರಿಂಗ್‌ ನಡೆಸಿ ವಶಕ್ಕೆ ಪಡೆದಿದ್ದಾರೆ.

Advertisement

ಕಾಡುಗೋಡಿ ಠಾಣಾ ವ್ಯಾಪ್ತಿಯ ಕಾಗೆ ಸೋಣೆನಹಳ್ಳಿಯಲ್ಲಿ  ಕೆ.ಆರ್‌.ಪುರ ಇನ್ಸ್‌ಪೆಕ್ಟರ್‌ ಜಯರಾಜ್‌ ಅವರ ತಂಡ ಕಾರ್ಯಾಚರಣೆ ನಡೆಸಿದೆ.

ನವೀನ್‌ ಮತ್ತು ಗಿರೀಶ್‌ ಅಲಿಯಾಸ್‌ ಗಿರಿ ಎನ್ನುವ ಇಬ್ಬರು ಕುಖ್ಯಾತ ಆರೋಪಿಗಳನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಜೀಪ್‌ ಮೇಲೆ ಕಲ್ಲು ತೂರಾಟ ಮಾಡಿ ಗಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ್ದಾರೆ. ಕೂಡಲೆ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ದುಷ್ಕರ್ಮಿಗಳ ದಾಳಿಗೆ ಪೇದೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಬ್ಬರು ಆರೋಪಿಗಳ ಬಲಕಾಲಿಗೆ ಗುಂಡು ತಗುಲಿದ್ದು ಕಾಡುಗೋಡಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next