Advertisement

ಜಾನುವಾರುಗಳಿಗೆ ಆಸರೆಯಾಗಿದ್ದ ಇನ್ಸ್ಪೆಕ್ಟರ್ ಮೊಹಮ್ಮದ್ ರಫಿಕ್ ನಿಧನ

04:39 PM Oct 21, 2021 | Team Udayavani |

ಬೆಂಗಳೂರು: ಜಾನುವಾರುಗಳಿಗೆ ಆಸರೆಯಾಗಿ ಹೃದಯ ವೈಶಾಲ್ಯತೆ ಮೆರೆದಿದ್ದ ಇನ್ಸಪೆಕ್ಟರ್ ಮೊಹಮ್ಮದ್ ರಫಿಕ್ ಇಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು.

Advertisement

ಲಾಕ್ ಡೌನ್ ಸಂಧರ್ಭದಲ್ಲಿ ಗೋವುಗಳಿಗೆ ರಕ್ಷಣೆ ನೀಡಿ ಆಹಾರ ನೀಡುತ್ತಿದ್ದ ಮೊಹಮ್ಮದ್ ರಫಿಕ್ ಅವರು ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಕರುವೊಂದನ್ನು ಸಾಕುತ್ತಿದ್ದರು. ಟ್ರಾನ್ಸಫರ್ ಆಗಿದ್ದರೂ ಕರುವನ್ನು ಜೊತೆಯಲ್ಲಿಯೇ ಕರೆದೊಯ್ಯುತ್ತಿದ್ದರು.

ಇದನ್ನೂ ಓದಿ:ನಕ್ಸಲ್ ನಂಟು : ವಿಠಲ ಮಲೆಕುಡಿಯ,ತಂದೆ ನಿರ್ದೋಷಿ ಎಂದ ಕೋರ್ಟ್

ನಗರದ ವಿವಿಧ ಠಾಣೆಗಳಲ್ಲಿ ಕೆಲಸ ಮಾಡಿದ್ದ ಮೊಹಮ್ಮದ್ ರಫಿಕ್ ಅವರು ಇತ್ತೀಚೆಗೆ ಸರಿಗಮಪ ರಿಯಾಲಿಟಿ ಶೋ ಕಾರ್ಯಕ್ರಮದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಸುಬ್ರಹ್ಮಣಿ ಜೊತೆ ಭಾಗವಹಿಸಿದ್ದರು.

Advertisement

ಗುರುವಾರ ಬೆಳಗ್ಗೆ ಮನೆಯಲ್ಲಿ ಸ್ನಾನಕ್ಕೆ ತೆರಳಿದ್ದಾಗ ಉಸಿರಾಟದ ತೊಂದರೆ ಕಂಡುಬಂದಿದೆ. ಕೂಡಲೆ ಮನೆಯವರು ವೈದ್ಯರನ್ನು ಕರೆಸಿದ್ದರು. ಆದರೆ ಅಷ್ಟರಲ್ಲೆ ಮೊಹಮ್ಮದ್ ರಫೀಕ್ ಮೃತಪಟ್ಟಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next