Advertisement

Café blast; ಮಹತ್ವದ ಸುಳಿವು ಸಿಕ್ಕಿದ್ದು, ಭೇದಿಸಲು ಹತ್ತಿರ: ಡಾ.ಜಿ.ಪರಮೇಶ್ವರ್

05:36 PM Mar 06, 2024 | Team Udayavani |

ಬೆಂಗಳೂರು:’ಮಾರ್ಚ್ 1 ರಂದು ರಾಮೇಶ್ವರಂ ಕೆಫೆಯಲ್ಲಿ ನಡೆದ ಕಡಿಮೆ ತೀವ್ರತೆಯ ಸ್ಫೋಟದ ಘಟನೆಯನ್ನು ಭೇದಿಸಲು ಪೊಲೀಸರು ಪ್ರಮುಖ ಸುಳಿವುಗಳನ್ನು ಕಂಡುಕೊಂಡಿದ್ದು ಪ್ರಕರಣವನ್ನು ಶೀಘ್ರ ಭೇದಿಸಲಿದ್ದಾರೆ’ ಎಂದು ಗೃಹ ಸಚಿವ ಜಿ ಪರಮೇಶ್ವರ್ ಬುಧವಾರ ಹೇಳಿದ್ದಾರೆ.

Advertisement

ಸುದ್ದಿಗಾರ ರೊಂದಿಗೆ ಮಾತನಾಡಿ ‘ಕಳೆದ ಎರಡು ದಿನಗಳಲ್ಲಿ ಪೊಲೀಸರಿಗೆ ಕೆಲವು ಮಹತ್ವದ ಸುಳಿವು ಸಿಕ್ಕಿದ್ದು, ಅವು ಭರವಸೆ ಮೂಡಿಸಿವೆ’ ಎಂದರು.

“ನಮ್ಮ ಅಧಿಕಾರಿಗಳು ಪ್ರಕರಣವನ್ನು ಭೇದಿಸಲು ಹತ್ತಿರವಾಗುತ್ತಿದ್ದಾರೆ. ನಿನ್ನೆ ಮತ್ತು ಹಿಂದಿನ ದಿನ ಕೆಲವು ಪ್ರಮುಖ ಮಾಹಿತಿಗಳನ್ನು ಸ್ವೀಕರಿಸಲಾಗಿದೆ, ಅದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಇದೇ ರೀತಿ ಮುಂದುವರಿದರೆ ತನಿಖೆ ಪೂರ್ಣಗೊಳಿಸುತ್ತೇವೆ’ಎಂದರು.

‘ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಲಾಗಿಲ್ಲ.ಅನುಮಾನದ ಆಧಾರದ ಮೇಲೆ, ಕೆಲವು ಜನರನ್ನು ಪೊಲೀಸರು ಕರೆಸಿ ಮಾಹಿತಿ ಸಂಗ್ರಹಿಸಿದ್ದಾರೆ’ ಎಂದು ಹೇಳಿದರು.

‘ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಪ್ರಕರಣವನ್ನು ಕೈಗೆತ್ತಿಕೊಳ್ಳಬೇಕಿತ್ತು ಆದರೆ ಅವರು ಇನ್ನೂ ಬಂದಿಲ್ಲ’ ಎಂದು ಪರಮೇಶ್ವರ್ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next