Advertisement

ಶಾಸಕ ಬಸನಗೌಡ ಯತ್ನಾಳ್ ಗೆ ಮತ್ತೆ ಪೊಲೀಸ್ ಭದ್ರತೆ ಆರಂಭ

12:33 PM Feb 15, 2021 | keerthan |

ವಿಜಯಪುರ: ಸಿ.ಎಂ. ಯಡಿಯೂರಪ್ಪ ಅವರನ್ನು ಟೀಕಿಸಿದ್ದೇನೆಂಬ ರಾಜಕೀಯ ಕಾರಣಕ್ಕೆ ತಮಗೆ ನೀಡಿದ್ದ ಪೊಲೀಸ್ ಭದ್ರತೆಯನ್ನು ಹಿಂಪಡೆಯಲಾಗಿತ್ತು. ಇದೀಗ ಪೊಲೀಸ್ ಇಲಾಖೆ ಭದ್ರತೆಯನ್ನು ಮತ್ತೆ ಆರಂಭಿಸಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ತಿಳಿಸಿದ್ದಾರೆ.

Advertisement

ನಗರದಲ್ಲಿ ಈ ಕುರಿತು ಪತ್ರಕರ್ತರಿಗೆ ಈ ಕುರಿತು ಪ್ರತಿಕ್ರಿಯೆ ನೀಡಿದ ಶಾಸಕ ಯತ್ನಾಳ, ನನಗೆ ನೀಡಿದ್ದ ಪೊಲೀಸ್ ಭದ್ರತೆಯನ್ನು ಹಿಂಪಡೆಯಲಾಗಿತ್ತು.ಕಳೆದ ಎರಡು ದಿನಗಳ ಹಿಂದೆ ಪೊಲೀಸ್ ಭದ್ರತೆಯನ್ನು ಪುನಃ ಆರಂಭಿಸಿದ್ದಾರೆ ಎಂದರು.

ಇದನ್ನೂ ಓದಿ:ಭಾಷಣ ಮಾಡುತ್ತಿರುವಾಗಲೇ ಕುಸಿದುಬಿದ್ದ ಗುಜರಾತ್ ಸಿಎಂ ವಿಜಯ್ ರೂಪಾಣಿ

ಸಿಎಂ ಪುತ್ರ ಹೇಳಿದ್ದಾನೆ ಎಂದು ಯಾರದೋ ಜೀವ ಬಲಿ ಕೊಡಲು ಒಪ್ಪದ ಪೊಲೀಸ್ ಇಲಾಖೆ ಹಿಂಪಡೆದಿದ್ದ ನನಗೆ ನೀಡಿದ್ದ ಭದ್ರತೆಯನ್ನು ಪುನಾರಂಭಿಸಿದೆ. ಪೊಲೀಸ್ ಇಲಾಖೆ ಸ್ವತಂತ್ರವಾಗಿ ವಿವಿಐಪಿ ಭದ್ರತೆ ನೀಡುತ್ತದೆ. ರಾಜಕೀಯದ ಒತ್ತಡಕ್ಕೆ ಮಣಿಯದೇ ಪೊಲೀಸ್ ಭದ್ರತೆ ಪುನಃ ನೀಡಿದಕ್ಕೆ ಪೊಲೀಸ್ ಇಲಾಖೆಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು.

ಇದನ್ನೂ ಓದಿ:ಶ್ರೀರಾಮಮಂದಿರ ನಿರ್ಮಾಣ ಭಾವನಾತ್ಮಕ ವಿಚಾರ: ಕೇಂದ್ರ ಸಚಿವ ಸದಾನಂದ ಗೌಡ

Advertisement
Advertisement

Udayavani is now on Telegram. Click here to join our channel and stay updated with the latest news.

Next