Advertisement
ನಗರದ ಅಪಾರ್ಟ್ಮೆಂಟ್ನ ವ್ಯವಸ್ಥಾಪಕರೊಬ್ಬರು, ಬೆಂಗಳೂರಿಗೆ ನಾಲ್ವರು ಉಗ್ರರು ಬಂದಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದರು. ಇದಕ್ಕೆ ಸ್ಪಷ್ಟನೆ ನೀಡಿರುವ ನಗರ ಪೊಲೀಸರು, ಇದೊಂದು ಸುಳ್ಳು ವದಂತಿ. ಸಾರ್ವಜನಿಕರು ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.
Related Articles
“ಇದೊಂದು ಸುಳ್ಳು ವದಂತಿ.
Advertisement
ಇದನ್ನು ನಂಬಬೇಡಿ ಮತ್ತು ಪ್ರೋತ್ಸಾಹಿಸಬೇಡಿ. ಸಾರ್ವಜನಿಕರು ಈ ತರಹದ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಬಾರದು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬೇಡಿ’ ಎಂದು ಮನವಿ ಮಾಡಿದ್ದಾರೆ. ಜತೆಗೆ, ಅಪಾರ್ಟ್ಮೆಂಟ್ ವ್ಯವಸ್ಥಾಪಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
ಮ್ಯಾನೆಜರ್ ಗೊಂದಲ: ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ನಗರದ ಎಲ್ಲೆಡೆ ಆಯಾ ಪೊಲೀಸ್ ಠಾಣೆಗಳ ಸಿಬ್ಬಂದಿ ತಮ್ಮ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಅಪರಾಧ ಚಟುವಟಿಕೆಗಳ ಕುರಿತು ನಿರಂತರವಾಗಿ ಅರಿವು ಮೂಡಿಸುತ್ತಿದ್ದಾರೆ.
ಅದೇ ರೀತಿ ಎರಡು ದಿನಗಳ ಹಿಂದೆ ಬೆಳ್ಳಂದೂರು ಠಾಣೆ ವ್ಯಾಪ್ತಿಯ ಚಿಕ್ಕನಾಯಕನಹಳ್ಳಿಯಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ಪೊಲೀಸರು, ಅಪಾರ್ಟ್ಮೆಂಟ್ ನಿವಾಸಿಗಳಿಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ವೇಳೆ ನಗರದಲ್ಲಿ ಉಗ್ರರು ಬಂದಿದ್ದಾರೆ ಎಂಬ ವದಂತಿಗಳು ಇವೆ. ಅವುಗಳಿಗೆ ಕಿವಿಗೊಡಬೇಡಿ. ಒಂದು ವೇಳೆ ಅನುಮಾನಸ್ಪದ ವ್ಯಕ್ತಿಗಳು ಕಂಡು ಬಂದರೆ, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಎಂದು ಮನವಿ ಮಾಡಿದ್ದಾರೆ.
ಆದರೆ, ಅಪಾರ್ಟ್ಮೆಂಟ್ನ ಮ್ಯಾನೆಜರ್ ಗೊಂದಲಕ್ಕೀಡಾಗಿ, ಉಗ್ರರೆಂದರೆ ಯಾರು? ಹೇಗಿರುತ್ತಾರೆ ಎಂದೆಲ್ಲ ಪ್ರಶ್ನಿಸಿದ್ದಾರೆ. ಈ ಕುರಿತು ಸಿಬ್ಬಂದಿ ವಿವರಿಸಿದ್ದಾರೆ. ಇದರಿಂದ ಅವೇಶಕ್ಕೊಳಗಾದ ಮ್ಯಾನೇಜರ್, ಮಾಧ್ಯಮಗಳಲ್ಲಿ ಪ್ರಸಾರವಾದ ಶ್ರೀಲಂಕಾ ಸ್ಫೋಟದ ಶಂಕಿತರ ಫೋಟೋಗಳನ್ನು ಗೂಗಲ್ ಮೂಲಕ ಸಂಗ್ರಹಿಸಿ, ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿ, ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದರು.
ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿ ನಿತ್ಯ ತಪಾಸಣೆ: ಕೆಲ ದಿನಗಳ ಹಿಂದೆ ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಇಡೀ ವಿಶ್ವವನ್ನೇ ತಲ್ಲಣಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಗುಪ್ತಚರ ಇಲಾಖೆ ಹಾಗೂ ಇತರೆ ಮೂಲಗಳ ಮಾಹಿತಿಯನ್ನಾಧರಿಸಿ ರಾಜ್ಯ ಪೊಲೀಸ್ ಇಲಾಖೆ ಎಲ್ಲೆಡೆ ಹೈಅಲರ್ಟ್ ಘೋಷಣೆ ಮಾಡಿತ್ತು. ಈ ಮಧ್ಯೆಯೇ ಲಂಕಾ ಸೇನಾ ಮುಖ್ಯಸ್ಥರು ಖಾಸಗಿ ಸುದ್ದಿ ವಾಹಿನಿಯ ಸಂದರ್ಶನವೊಂದರಲ್ಲಿ ಸ್ಫೋಟದ ಶಂಕಿತ ಉಗ್ರರು ಬೆಂಗಳೂರಿಗೂ ಹೋಗಿದ್ದರು ಎಂದು ಹೇಳಿಕೆ ನೀಡಿದ್ದರು.
ಇದರಿಂದ ಎಚ್ಚರಗೊಂಡ ನಗರ ಪೊಲೀಸರು, ನಗರಾದ್ಯಂತ ಕಟ್ಟೆಚ್ಚರ ವಹಿಸಿದ್ದು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಬಸ್ ನಿಲ್ದಾಣ, ರೈಲು ನಿಲ್ದಾಣ ಸೇರಿ ಎಲ್ಲ ಸಾರ್ವಜನಿಕ ಸ್ಥಳಗಳು ಹಾಗೂ ಸೂಕ್ಷ್ಮ ಪ್ರದೇಶಗಳನ್ನು ಪ್ರತಿನಿತ್ಯ ಪರಿಶೀಲನೆ ನಡೆಸುತ್ತಿದ್ದಾರೆ. ಅನುಮಾನಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ಕೂಡ ನಡೆಸುತ್ತಿದ್ದಾರೆ.
ಮತ್ತೂಂದೆಡೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಪಾಸ್ ಪೋರ್ಟ್ ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿರುವ ಪೊಲೀಸರು ವಿದೇಶ ಅಥವಾ ನೆರೆ ರಾಜ್ಯಗಳಿಂದ ರಾಜ್ಯಕ್ಕೆ ಬರುವ ವ್ಯಕ್ತಿಗಳ ಬಗ್ಗೆ ನಿಗಾವಹಿಸಿದ್ದು, ಅವರ ಕಾರ್ಯಚಟುವಟಿಕೆಗಳ ಮೇಲೂ ಹದ್ದಿನ ಕಣ್ಣಿಟ್ಟಿದ್ದಾರೆ.