Advertisement

ಪೊಲೀಸ್‌ ವೇತನ ಹೆಚ್ಚಳ : ಔರಾದ್ಕರ್‌ ವರದಿ ಪರಿಗಣಿಸಲು ಪರಂ ಪತ್ರ 

06:50 AM Jan 29, 2018 | |

ಬೆಂಗಳೂರು: ಪೊಲೀಸ್‌ ಇಲಾಖೆಯಲ್ಲಿ ಐಪಿಎಸ್‌ಯೇತರ ಸಿಬಂದಿ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಎಡಿಜಿಪಿ ರಾಘವೇಂದ್ರ ಔರಾದ್ಕರ್‌ ಸಮಿತಿ ವರದಿಯನ್ನು ವೇತನ ಪರಿಷ್ಕರಣೆ ಸಂದರ್ಭದಲ್ಲಿ ಪರಿಗಣಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಾ| ಜಿ.ಪರಮೇಶ್ವರ್‌ ಆರನೇ ವೇತನ ಆಯೋಗದ ಅಧ್ಯಕ್ಷ ಎಂ.ಆರ್‌ ಶ್ರೀನಿವಾಸಮೂರ್ತಿಯವರಿಗೆ ಪತ್ರ ಬರೆದಿದ್ದಾರೆ.

Advertisement

ಪೊಲೀಸ್‌ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬಂದಿ ಹಾಗು ಅಧಿಕಾರಿಗಳ  ವೇತನ, ಭತ್ತೆ ಹೆಚ್ಚಳ ಕುರಿತು ತಾವು ಗೃಹ ಸಚಿವರಾಗಿದ್ದಾಗ ಉನ್ನತ ಪೊಲೀಸ್‌ ಅಧಿಕಾರಿಯಾಗಿದ್ದ  ಔರಾದ್ಕರ್‌ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಈ ಸಮಿತಿ ದೇಶದ ವಿವಿಧ ರಾಜ್ಯಗಳ ಪೊಲೀಸ್‌ ಇಲಾಖೆಯ ಸಿಬಂದಿ ಪಡೆಯುತ್ತಿರುವ ವೇತನ ಮತ್ತು ಇತರೆ ಭತ್ತೆಗಳ ಬಗ್ಗೆ ಅಧ್ಯಯನ ನಡೆಸಿ ವೇತನ ಪರಿಷ್ಕರಣೆ ಮಾಡಬಹುದು ಎಂದು ಸರಕಾರಕ್ಕೆ  ವರದಿ ಸಲ್ಲಿಸಿದೆ. ಸಮಿತಿಯ ವರದಿಯಲ್ಲಿನ ಅಂಶಗಳನ್ನು ಪರಿಗಣಿಸಿ ಪೊಲೀಸ್‌ ಇಲಾಖೆ ಸಿಬಂದಿ ವೇತನ ಹಾಗೂ ಭತ್ತೆ ಹೆಚ್ಚಳಕ್ಕೆ ಶಿಫಾರಸು ಮಾಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next