Advertisement
ಪ್ರಸ್ಟ್ರಸ್ಟ್ ಭವನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗೋಪಾಳದ ಶ್ರೀರಾಮ ನಗರ ಹಾಗೂ ಸೀಗೆಹಟ್ಟಿ ಬಡಾವಣೆಯಲ್ಲಿ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಸಂದರ್ಭದಲ್ಲಿ ಸಣ್ಣ ಅಹಿತಕರ ಘಟನೆ ನಡೆದಿತ್ತು. ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆ ನಡೆದ 12 ಗಂಟೆಯೊಳಗೆ 9 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.
ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಬಂದೋಬಸ್ತ್ಗೆ ಈಗಾಗಲೇ ನಿಯೋಜನೆ ಮಾಡಲಾಗಿದೆ. ಸೂಕ್ಷ ಪ್ರದೇಶಗಳನ್ನು ಗುರುತಿಸಿ ಹೆಚ್ಚಿನ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದರು. ಎಂತಹುದೇ ಸನ್ನಿವೇಶ ಎದುರಾದರೂ ಅದನ್ನು ಹತೋಟಿಗೆ ತರುವಲ್ಲಿ ಪೊಲೀಸ್ ಇಲಾಖೆ ಸಿದ್ದವಾಗಿದೆ. ಶಾಂತಿಯುತವಾಗಿ ಗಣಪತಿ ವಿಸರ್ಜನೆ ನಡೆಯಬೇಕು. ಸಮಾಜದಲ್ಲಿ ಅಹಿತಕರ ವಾತಾವರಣ ಹುಟ್ಟುಹಾಕಲು ಪ್ರಯತ್ನಿಸಿದರೆ ಅಂತಹವರ ವಿರುದ್ಧ ಇಲಾಖೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.
Related Articles
Advertisement
ವೀಡಿಯೋ ಚಿತ್ರೀಕರಣ: ಜೊತೆಗೆ ಸೂಕ್ಷ ಸ್ಥಳಗಳಲ್ಲಿ, ಪ್ರಮುಖ ವೃತ್ತಗಳಲ್ಲಿ, ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಸಿಸಿ ಕ್ಯಾಮೆರಾ, ವೀಡಿಯೋ ಚಿತ್ರೀಕರಣ ನಡೆಸಲಾಗುವುದು. ಇದಕ್ಕಾಗಿ 53 ವೀಡಿಯೋ ಹಾಗೂ 223 ಸಿಸಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.ಈಗಾಗಲೇ 5 ಜನ ಗೂಂಡಾಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾಡಳಿತ ಆದೇಶ ನೀಡಿದೆ. ಗೂಂಡಾ ಪಟ್ಟಿಯಲ್ಲಿರುವವರು ನಗರದಲ್ಲಿ ಕಂಡು ಬಂದರೆ ಬಂಧಿಸಲಾಗುವುದು. ಪರ ಊರುಗಳಿಂದ ಬರುವವರು ಮೆರವಣಿಗೆಯಲ್ಲಿ ಶಾಂತಿಯುತವಾಗಿ ಪಾಲ್ಗೊಳ್ಳಬೇಕು. ಈಗಾಗಲೇ ಪೊಲೀಸ್ ಇಲಾಖೆ ಸಿಬ್ಬಂದಿಗಳು ನಗರದ ವಸತಿಗೃಹಗಳಿಗೆ ತೆರಳಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಸುತ್ತಮುತ್ತಲಿನ ಜಿಲ್ಲೆಗಳ ಪೊಲೀಸ್ ಅಧೀಕ್ಷಕರೊಂದಿಗೂ ಚರ್ಚೆ ನಡೆಸಿ, ಅಗತ್ಯ ಮಾಹಿತಿ ಪಡೆಯಲಾಗುತ್ತಿದೆ ಎಂದರು. ಪಾಲಿಕೆ ಆಯುಕ್ತ ಮುಲೈ ಮೊಹಿಲನ್ ಮಾತನಾಡಿ, ಎಚ್ಎಂಎಸ್ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆಗೆ ಪಾಲಿಕೆಯಿಂದ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಪೊಲೀಸ್ ಇಲಾಖೆಗೆ ಅಗತ್ಯ ಸಹಕಾರ ನೀಡಲಾಗುವುದು ಎಂದು
ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್, ಕಾರ್ಯದರ್ಶಿ ಶಿ.ವಿ. ಸಿದ್ದಪ್ಪ ಇದ್ದರು. ನಗರದ ಆಯಕಟ್ಟಿನ ಸೂಕ್ಷ್ಮ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ. 222 ಸೂಕ್ಷ್ಮ ಸ್ಥಳಗಳನ್ನು ಗುರುತಿಸಿ ಭದ್ರತೆ ಕಲ್ಪಿಸಲಾಗಿದೆ. 50ಕ್ಕೂ ಹೆಚ್ಚು ಪೊಲೀಸ್ ವಾಹನಗಳು ಬಂದೋಬಸ್ತ್ಗೆ ನಿಯೋಜನೆಗೊಂಡಿವೆ. ಇವುಗಳು ನಗರಾದ್ಯಂತ ಹಗಲು ರಾತ್ರಿ ಸಂಚರಿಸಲಿವೆ. 22
ಚೀತಾ ವಾಹನಗಳನ್ನು ಬಳಕೆ ಮಾಡಿಕೊಳ್ಳಲಾಗುವುದು. 2 ಡ್ರೋಣ್ ಕ್ಯಾಮೆರಾ ಮೂಲಕ ಚಿತ್ರೀಕರಣ ನಡೆಸಲಾಗುವುದು.
ಅಭಿನವ ಖರೆ, ಎಸ್ಪಿ