Advertisement

ಅರ್ಜಿದಾರರಿಗೆ ಪೊಲೀಸ್‌ ಭದ್ರತೆ

12:40 AM Apr 25, 2019 | Lakshmi GovindaRaju |

ಬೆಂಗಳೂರು: 2018ರ ವಿಧಾನಸಭೆ ಚುನಾವಣೆ ವೇಳೆ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮನೆಯೊಂದರಲ್ಲಿ ಸಾವಿರಾರು ಮತದಾರರ ಗುರುತಿನ ಚೀಟಿಗಳು ಪತ್ತೆಯಾದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿದ್ದ ದೂರುದಾರ ಎನ್‌.ರಾಕೇಶ್‌ ಹಾಗೂ ಇತರರಿಗೆ ಸೂಕ್ತ ಪೊಲೀಸ್‌ ಭದ್ರತೆ ಒದಗಿಸಲಾಗಿದೆ ಎಂದು ಬುಧವಾರ ಸರ್ಕಾರ ಲಿಖೀತ ರೂಪದಲ್ಲಿ ಹೈಕೋರ್ಟ್‌ಗೆ ಮಾಹಿತಿ ನೀಡಿತು.

Advertisement

ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ ಕುಮಾರ್‌ ಅವರಿದ್ದ ಏಕಸದಸ್ಯ ಪೀಠಕ್ಕೆ ಸರ್ಕಾರಿ ವಕೀಲ ರಾಚಯ್ಯ ಈ ಮಾಹಿತಿ ನೀಡಿದರು. ರಾಕೇಶ್‌ ಅವರಿಗೆ ಇಬ್ಬರು ಗನ್‌ಮ್ಯಾನ್‌ಗಳನ್ನು ನಿಯೋಜಿಸಲಾಗಿದ್ದು, ಅವರ ಮನೆಗೂ ಭದ್ರತೆ ನೀಡಲು ನಗರ ಸಶಸ್ತ್ರ ಮೀಸಲು ಪಡೆ ಹಾಗೂ ಹೊಯ್ಸಳ ಸಿಬ್ಬಂದಿ ನಿಯೋಜಿಸಲು ನಗರ ಪೊಲೀಸ್‌ ಆಯುಕ್ತರು ಈಗಾಗಲೇ ಆದೇಶಿಸಿದ್ದಾರೆ ಎಂಬ ಆದೇಶ ಪ್ರತಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ಕಮಿಷನರ್‌ ವಿರುದ್ಧ ಗರಂ: ಇದಕ್ಕೂ ಮೊದಲು ಬೆಳಗಿನ ಕಲಾಪದ ವೇಳೆ ಅರ್ಜಿ ವಿಚಾರಣೆ ವೇಳೆ ಕೋರ್ಟ್‌ ಆದೇಶದ ಹೊರತಾಗಿಯೂ ಅರ್ಜಿದಾರರು ಇದುವರೆಗೂ ಪೊಲೀಸ್‌ ಭದ್ರತೆ ಒದಗಿಸಿಲ್ಲ ಎಂದು ದೂರಿದರು. ಇದಕ್ಕೆ ತೀವ್ರ ಆಕ್ರೋಶವ್ಯಕ್ತಪಡಿಸಿದ ನ್ಯಾಯಪೀಠ, ಅರ್ಜಿದಾರರಿಗೆ ಭದ್ರತೆ ಒದಗಿಸುವಂತೆ ಆದೇಶ ನೀಡಿ 15 ದಿನಗಳು ಕಳೆದರೂ ಇನ್ನು ಆದೇಶ ಪಾಲಿಸಿಲ್ಲವೆಂದರೆ ಹೇಗೆ? ಆಯುಕ್ತರ ಈ ನಡೆ ಸಹಿಸಲು ಸಾಧ್ಯವಿಲ್ಲ. ಮಧ್ಯಾಹ್ನದ ಒಳಗೆ ಅರ್ಜಿದಾರರಿಗೆ ಸೂಕ್ತ ಭದ್ರತೆ ಒದಗಿಸಿ, ಆ ಕುರಿತ ವರದಿ ಸಲ್ಲಿಸಬೇಕು. ಇಲ್ಲವಾದಲ್ಲಿ ಪೊಲೀಸ್‌ ಆಯುಕ್ತರನ್ನೇ ಕೋರ್ಟ್‌ಗೆ ಕರೆಯಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿತು.

Advertisement

Udayavani is now on Telegram. Click here to join our channel and stay updated with the latest news.

Next