Advertisement

ರಾಜಕೀಯ ಜಟಾಪಟಿ : ಸಂಸದೆ ಸುಮಲತಾ–ನಿರ್ಮಾಪಕ ರಾಕ್ ಲೈನ್ ಮನೆಗೆ ಪೊಲೀಸ್ ಭದ್ರತೆ

12:52 PM Jul 10, 2021 | Team Udayavani |

ಬೆಂಗಳೂರು:  ಮಾಜಿ ಸಿಎಂ ಕುಮಾರ ಸ್ವಾಮಿ ಜೊತೆಗಿನ ಕಾದಾಟದ ಹಿನ್ನೆಲೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹಾಗೂ ಸಿನಿಮಾ ನಿರ್ಮಾಪಕ ರಾಕ್ ಲೈನ್ ನಿವಾಸಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

Advertisement

ರಾಕ್ ಲೈನ್ ವೆಂಕಟೇಶ್ ಅವರ ಮಹಾಲಕ್ಷ್ಮಿ ನಿವಾಸಕ್ಕೆ ಬ್ಯಾರಿಕೇಡ್ ಹಾಕಲಾಗಿದೆ. ಹಾಗಿದ್ದರೂ ಕುಮಾರಸ್ವಾಮಿ ಬೆಂಬಲಿಗರು ಬೆಳಿಗ್ಗೆಯೇ ರಾಕ್ ಲೈನ್ ನಿವಾಸಕ್ಕೆ ಮುತ್ತಿಗೆ ಹಾಕಿ ತಮ್ಮ ನಾಯಕನ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಧಿಕ್ಕಾರ ಹಾಕಿದ್ದಾರೆ.

ಇನ್ನು, ಸುಮಲತಾ ಅಂಬರೀಶ್ ನಿವಾಸಕ್ಕೂ ಬಿಗಿ ಭದ್ರತೆ ಒದಗಿಸಲಾಗಿದೆ. ರಾಕ್ ಲೈನ್ ನಿವಾಸದ ಎದುರು ಪ್ರತಿಭಟನೆ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಪೊಲೀಸರು ಜೆಪಿ ನಗರದಲ್ಲಿರುವ ಸುಮಲತಾ ನಿವಾಸಕ್ಕೂ ಭದ್ರತೆ ಒದಗಿಸಿದ್ದಾರೆ.

ಕೆಲ ದಿನಗಳಿಂದ ಜೆಡಿಎಸ್ ನಾಯಕ ಕುಮಾರ ಸ್ವಾಮಿ ಹಾಗೂ ಸಂಸದೆ ಸುಮಲತಾ ಅವರ ನಡುವೆ ಬಹಿರಂಗವಾಗಿಯೆ ವಾಗ್ಯುದ್ಧ ನಡೆಯುತ್ತಿದೆ. ಸುಮಲತಾ ಅವರ ಪರವಾಗಿ ಚಲನಚಿತ್ರ ಹಿರಿಯ ನಟ ದೊಡ್ಡಣ್ಣ ಹಾಗೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರು ಹೆಚ್ ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುಮಲತಾ ಅವರ ಪುತ್ರ ಅಭಿಷೇಕ್ ಅಂಬರೀಶ್ ಕೂಡ ಶುಕ್ರವಾರ ಕುಮಾರ ಸ್ವಾಮಿ ಹಾಗೂ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ವಿರುದ್ಧ ಕಿಡಿ ಕಾರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next