Advertisement

Police ಕಾಂಗ್ರೆಸ್‌ ಕಾರ್ಯಕರ್ತರಂತೆ ವರ್ತಿಸುವುದನ್ನು ಬಿಡಲಿ: ರಾಘವೇಂದ್ರ

09:09 PM Dec 16, 2023 | Shreeram Nayak |

ಶಿವಮೊಗ್ಗ: ಭದ್ರಾವತಿಯ ಬಿಜೆಪಿ ಕಾರ್ಯಕರ್ತ ಗೋಕುಲ್‌ ಅವರ ಮೇಲೆ ನಡೆದ ಹಲ್ಲೆ ಘಟನೆಗೆ ಸಂಬಂ ಧಿಸಿ ಪೊಲೀಸರು ಕಾಂಗ್ರೆಸ್‌ ಕಾರ್ಯಕರ್ತರಂತೆ ವರ್ತಿಸದೆ, ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

Advertisement

ನಗರದಲ್ಲಿ ಶನಿವಾರ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೋಕುಲ್‌ ಅವರ ಆರೋಗ್ಯ ವಿಚಾರಿಸಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಭದ್ರಾವತಿಯಲ್ಲಿ ಯುವಮೋರ್ಚಾ ಪದಾಧಿಕಾರಿ ಗೋಕುಲ್‌ ಮೇಲೆ ಶಾಸಕರ ಕಡೆಯವರು ಹಲ್ಲೆ ಮಾಡಿದ್ದಾರೆಂದು ಹೇಳಲಾಗುತ್ತಿದೆ. ಆದರೆ ಕಾಂಗ್ರೆಸ್‌ ಮುಖಂಡರು ಗೋಕುಲ್‌ ಮೇಲೆಯೇ ಕೇಸು ದಾಖಲಿಸಿದ್ದಾರೆ. ಇದೆಲ್ಲ ಸರಿಯಲ್ಲ ಎಂದರು.

ಘಟನೆಗೆ ಸಂಬಂಧಿಸಿ ಪೊಲೀಸ್‌ ಅಧಿಕಾರಿಗಳಿಗೆ ದೂರು ಕೊಟ್ಟರೂ ನಿರ್ಲಕ್ಷé ವಹಿಸಿದ್ದು, ಘಟನೆಯನ್ನು ಹಗುರವಾಗಿ ತೆಗೆದುಕೊಂಡಿದ್ದಾರೆ ಎಂದು ದೂರಿದರು.

ಸಂಸತ್‌ ಮೇಲಿನ ದಾಳಿ ಗಂಭೀರ ಸಂಗತಿ
ಸಂಸತ್‌ ಮೇಲಿನ ದಾಳಿಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ರಾಘವೇಂದ್ರ, ಇದೊಂದು ಗಂಭೀರ ಮತ್ತು ತಲೆತಗ್ಗಿಸುವ ವಿಷಯ. ಇದರ ಹಿಂದೆ ಷಡ್ಯಂತ್ರವಿದೆ. ಮೈಸೂರಿನ ಸಂಸದ ಪ್ರತಾಪಸಿಂಹ ಅವರ ಮೇಲೆ ವೃಥಾ ಆರೋಪ ಮಾಡಲಾಗುತ್ತಿದೆ. ಕರ್ನಾಟಕದವರು ಎಂದರೆ ಎಲ್ಲರಿಗೂ ಪ್ರೀತಿ ಇರುತ್ತದೆ. ಸಹಜವಾಗಿಯೇ ಸಂಸತ್‌ಗೆ ಪ್ರವೇಶ ಮಾಡಲು ಪಾಸು ಕೊಡುತ್ತಾರೆ. ಹಾಗೆಯೇ ಅವರೂ ಕೊಟ್ಟಿದ್ದಾರೆ. ಇದರಲ್ಲಿ ತಪ್ಪೇನಿಲ್ಲ ಎಂದರು.

ರಾಹುಲ್‌ ಗಾಂಧಿ ಯವರು ಪ್ರಧಾನಿಯವರನ್ನು “ಶನಿ’ ಎಂದು ಕರೆದಿದ್ದಾರೆ. ಭಾರತಕ್ಕೆ ತಟ್ಟಿದ್ದ “ಶನಿ’ಯನ್ನು ಓಡಿಸಿದವರೇ ಮೋದಿಯವರು. ಇಡೀ ವಿಶ್ವವೇ ಅವರನ್ನು ಮೆಚ್ಚಿರುವುದು ರಾಹುಲ್‌ ಟೀಕೆ ಖಂಡನೀಯ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next