Advertisement

ಕಾಂಗ್ರೆಸ್ ನಾಯಕರ ರಾಜಭವನ ಮುತ್ತಿಗೆಗೆ ಪೊಲೀಸರ ತಡೆ

10:54 AM Jul 11, 2019 | Team Udayavani |

ಬೆಂಗಳೂರು: ಶಾಸಕರನ್ನು ಸೆಳೆದು ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಕಾಂಗ್ರೆಸ್‌ ನಾಯಕರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಬುಧವಾರ ಮಧ್ಯಾಹ್ನ ರಾಜಭವನಕ್ಕೆ ಮುತ್ತಿಗೆಗೆ ಯತ್ನವನ್ನು ಪೊಲೀಸರು ವಿಫ‌ಲಗೊಳಿಸಿದ್ದಾರೆ.

Advertisement

ಕಾಂಗ್ರೆಸ್‌ ಉಸ್ತುವಾರಿ ವೇಣುಗೋಪಾಲ್‌, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಸೇರಿ ಹಲವು ನಾಯಕರು ಮೆರವಣಿಗೆ ನಡೆಸಿ ರಾಜಭವನಕ್ಕೆ ಮುತ್ತಿಗೆ ಹಾಕಲು ಮುಂದಾದರು.

ಬ್ಯಾರಿಕೇಡ್‌ಗಳನ್ನು ಹಾಕಿ ಮೆರವಣಿಗೆಗೆ ತಡೆ ಒಡ್ಡಿದ ಪೊಲೀಸರು ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ಪ್ರತಿಭಟನೆಗೆ ಪೊಲೀಸರು ತಡೆ ಒಡ್ಡಿದ ಕಾರಣಕ್ಕೆ ರಾಜಭವನ ರಸ್ತೆಯಲ್ಲಿಯೆ ಕುಳಿತು ಕಾಂಗ್ರೆಸ್‌ ನಾಯಕರು ಪ್ರತಿಭಟನೆ ಮುಂದುವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next