Advertisement

Mangalore: ಪೊಲೀಸ್‌ ಆತ್ಮಹತ್ಯೆ

01:11 AM Sep 15, 2023 | Team Udayavani |

ಮಂಗಳೂರು: ಮಂಗಳೂರಿನ ಸಂಚಾರ ದಕ್ಷಿಣ ಠಾಣೆಯಲ್ಲಿ ಕಾನ್‌ಸ್ಟೆಬಲ್‌ ಆಗಿದ್ದ ಮಹೇಶ್‌ (31) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ.

Advertisement

ಮೂಲತಃ ಗದಗದವರಾದ ಮಹೇಶ್‌ ನಗರದ ಕಪಿತಾನಿಯೋದಲ್ಲಿ ಬಾಡಿಗೆ ಮನೆಯಲ್ಲಿ ಇನ್ನೋರ್ವ ಪೊಲೀಸ್‌ ಸಿಬಂದಿಯೊಂದಿಗೆ ವಾಸವಾಗಿದ್ದರು. ಮಧ್ಯಾಹ್ನ ವೇಳೆ ಬಾಡಿಗೆ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ. ಅವರ ಕುಟುಂಬ ಸದಸ್ಯರು ಆಗಮಿಸಿ ದೂರು ನೀಡಿದ ಅನಂತರ ಮಾಹಿತಿ ದೊರೆಯಬಹುದು ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next