ಶಿವಮೊಗ್ಗ: ಕೋವಿಡ್ 19 ಸೋಂಕು ಪ್ರಸರಣ ತಡೆಯಲು ಸರ್ಕಾರ ವಿಧಿಸಿರುವ ಕರ್ಫ್ಯೂವನ್ನು ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಡುವವರಿಗೆ ಶಿವಮೊಗ್ಗ ಪೊಲೀಸರು ಶನಿವಾರ ರಾತ್ರಿ ಬಿಸಿ ಮುಟ್ಟಿಸಿದ್ದಾರೆ.
ಶನಿವಾರ ಮಧ್ಯರಾತ್ರಿ ಕೋಟೆ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಚಂದ್ರಶೇಖರ್ ನೇತೃತ್ವದಲ್ಲಿ ಕಾರ್ಯಾಚರಣೆ ಪೊಲೀಸರು ನಡೆಸಿದ್ದಾರೆ. ರಾತ್ರಿ ಹನ್ನೊಂದು ಗಂಟೆಯಿಂದಲೇ ಕಾರ್ಯಾಚರಣೆಗೆ ಇಳಿದಿದ್ದ ಇನ್ಸ್ ಪೆಕ್ಟರ್ ಚಂದ್ರಶೇಖರ್ ನೇತೃತ್ವದ ಪೊಲೀಸರ ತಂಡ ವೀಕೆಂಡ್ ಕರ್ಪ್ಯೂ ಉಲ್ಲಂಘಿಸಿ ಮನೆಯಿಂದ ಹೊರಬಂದವರನ್ನು ಮಧ್ಯರಾತ್ರಿಯೇ ಠಾಣೆಗೆ ಕರೆತಂದರು.
ಇದನ್ನೂ ಓದಿ:ಎಲ್ಲ ಭಾರತೀಯರಿಗಾಗಿ ಅಯೋಧ್ಯಾ ನಗರಿ : ಅಯೋಧ್ಯೆ ಕಾಮಗಾರಿ ಅವಲೋಕನ
ಪೊಲೀಸ್ ಠಾಣಾ ಆವರಣದಲ್ಲಿ ಖುದ್ದು ಇನ್ಸ್ ಪೆಕ್ಟರ್ ಚಂದ್ರಶೇಖರ್ ಅವರೇ ಕರ್ಪ್ಯೂ ನಿಯಮ ಉಲ್ಲಂಘಿಸಿದವರಿಗೆ ಮಧ್ಯರಾತ್ರಿ ವ್ಯಾಯಾಮ ಮಾಡಿಸಿದರು. ಬಳಿಕ ನಿಯಮ ಉಲ್ಲಂಘಿಸಿದವರಿಗೆ ಸರಿಯಾಗಿ ಕ್ಲಾಸ್ ತೆಗೆದುಕೊಂಡರು. ಇದೇ ವೇಳೆ ಮದ್ಯಪಾನ ಸೇವಿಸಿ ವಾಹನ ಓಡಿಸಿದವರಿಗೆ ದಂಡ ವಿಧಿಸಿದರು