Advertisement

ಠಾಣೆಯಲ್ಲೇ ಪೊಲೀಸರ ಸಮವಸ್ತ್ರ ಹರಿದು ಹಲ್ಲೆ, ಜೀವ ಬೆದರಿಕೆ: ಇಬ್ಬರ ಬಂಧನ

04:28 PM Nov 07, 2022 | Team Udayavani |

ಹೊಸನಗರ: ಪಿಎಸ್ಐ ಸೇರಿದಂತೆ ಪೊಲೀಸರ ಸಮವಸ್ತ್ರ ಹರಿದು, ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ಪೊಲೀಸ್ ಠಾಣೆಯಲ್ಲೇ ನಡೆದಿದೆ. ಹೀಗಂತ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರಿಂದಲೇ ದೂರು ದಾಖಲಾಗಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.

Advertisement

ಬೇಳೂರು ಗ್ರಾಮದ ಮಕ್ಕಿಮನೆ ವಾಸಿಗಳಾದ ಕೃಷ್ಣಮೂರ್ತಿ (45 ವ), ರಾಮಚಂದ್ರ (50 ವ) ಬಂಧಿತ ಆರೋಪಿಗಳು.

ಹಲ್ಲೆಯಲ್ಲಿ ಗಾಯಗೊಂಡ ಪೊಲೀಸ್ ಸಿಬ್ಬಂದಿ ದೇವರಾಜ ನಾಯ್ಕ್ ದೂರು ನೀಡಿದ್ದಾರೆ.

ಇದನ್ನೂ ಓದಿ:2012ರ ರೇಪ್ ಆ್ಯಂಡ್ ಮರ್ಡರ್ ಆರೋಪಿಗಳನ್ನು ಖುಲಾಸೆ ಮಾಡಿದ ಸುಪ್ರೀಂ!

ಭಾನುವಾರ ಸಂಜೆ ಠಾಣೆ ಬಂದ ಹರೀಶ್ ನೀಡಿದ ದೂರಿನ ಅರ್ಜಿಯಂತೆ, ಕೃಷ್ಣಮೂರ್ತಿ ಮತ್ತು ರಾಮಚಂದ್ರ ಎಂಬುವರನ್ನು ಪಿಎಸ್ಐ ನಾಗರಾಜ್, ಹೆಚ್ ಸಿ ವೆಂಕಟೇಶ್ ಮತ್ತು ದೇವರಾಜ ನಾಯ್ಕ ವಿಚಾರಣೆ ನಡೆಸುತ್ತಿದ್ದರು. ಈ ವೇಳೆ ತಮ್ಮ ಕೃಷ್ಣಮೂರ್ತಿ ಮತ್ತು ರಾಮಚಂದ್ರ ಸಮವಸ್ತ್ರ ಹರಿದು, ಅವಾಚ್ಯವಾಗಿ ಬೈದು, ಹಲ್ಲೆ ಮಾಡಿ, ಜೀವ ಬೆದರಿಕೆಯನ್ನು ಹಾಕಿದ್ದಲ್ಲದೇ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Advertisement

ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೆಕ್ಷನ್ 504, 353, 332, 506 r/w, 34 IPC ನಂತೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಾದ ಕೃಷ್ಣಮೂರ್ತಿ ಮತ್ತು ರಾಮಚಂದ್ರ ಎಂಬುವರನ್ನು ಬಂಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next