Advertisement

ಪೋಲಿಯೋ ಮುಕ್ತಿಗೆ ಜಾಗೃತರಾಗಿ

07:41 AM Mar 11, 2019 | Team Udayavani |

ಕುದೂರು: ಪ್ರತಿಯೊಬ್ಬ ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಗ್ರಾಮ ಪಂಚಾಯ್ತಿ ಅಧ್ಯಕ್ಷ ಕೆ.ಎಂ.ರಾಘವೇಂದ್ರ ತಿಳಿಸಿದರು.

Advertisement

ಕುದೂರು ಗ್ರಾಮದ ಬಸ್‌ ನಿಲ್ದಾಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ನಡೆದ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿಶ್ವ ಸಂಸ್ಥೆ ಸಹಯೋಗದಲ್ಲಿ ವಿಶ್ವವನ್ನು ಪೋಲಿಯೋ ಮುಕ್ತವನ್ನಾಗಿಸಲು 5 ವರ್ಷದೊಳಗಿನ ಮಕ್ಕಳಲ್ಲಿ ಅಂಗವಿಕಲತೆಯನ್ನು ತಡೆಯುವ ಉದ್ದೇಶದಿಂದ ದೇಶಾದ್ಯಂತ ಪೋಲಿಯೋ ಲಸಿಕೆ ಹಾಕಲಾಗುತ್ತಿದೆ.

ಈಗಾಗಲೇ ನಮ್ಮ ದೇಶದಲ್ಲಿ ಪೋಲಿಯೋ ಮುಕ್ತವಾಗಿದ್ದು, ಈ ಯೋಜನೆಯು ಆರೋಗ್ಯ ಇಲಾಖೆಯ ಸಹಕಾರದಿಂದ ಶೇ. 100ರಷ್ಟು ಯಶಸ್ಸು ಕಂಡಿದೆ. ಪ್ರತಿಯೊಬ್ಬ ಪೋಷಕರು ತಮ್ಮ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ತಪ್ಪದೆ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಸಲಹೆ ನೀಡಿದರು.

ಲಸಿಕೆ ಮೂಲಕ ಮಕ್ಕಳನ್ನು ಕಾಪಾಡಿ: ವೈದ್ಯಾಧಿಕಾರಿ ಶಿಲ್ಪಾಶ್ರೀ ಮಾತನಾಡಿ, ಪೋಲಿಯೋ ಲಸಿಕೆ ಹಾಕಿವ ಕಾರ್ಯಕ್ರಮವು ಮಾ.10ರಿಂದ 12ರವರೆಗೆ ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮೂರು ದಿನಗಳ ಕಾಲ ಎಲ್ಲಾ ಬೂತ್‌ಗಳಲ್ಲಿ ಪೋಲಿಯೋ ಲಸಿಕೆ ಹಾಕಲಾಗುತ್ತದೆ. ಪ್ರತಿಯೊಬ್ಬರು 5 ವರ್ಷದೊಳಿಗೆ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿ ಅಂಗವಿಕಲತೆಯಾಗದಂತೆ ಮಕ್ಕಳನ್ನು ಕಾಪಾಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ಸಹಾಯಕ ಲೋಕೇಶ್‌ ಮೂರ್ತಿ, ಗ್ರಾಪಂ ಸದಸ್ಯ ಬಾಲಕೃಷ್ಣ, ಮಹದೇವ, ಕಾವ್ಯ, ಆಶಾ, ಮೇರಿ, ಆಶಾ ಕಾರ್ಯಕರ್ತೆಯರಾದ ಮಮತ, ರಾಜೇಶ್ವರಿ, ಲಿಖೀತ್‌, ಯೋಗಿತ, ಅಶೋಕ್‌ ಸೇರಿದಂತೆ ಅನೇಕರು ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next