Advertisement

ಜನವರಿ ಬಳಿಕ ರಾಜ್ಯದಲ್ಲಿ ಪಕ್ಷಾಂತರ ಪರ್ವ: ಸತೀಶ್ ಜಾರಕಿಹೊಳಿ

04:39 PM Oct 22, 2022 | Team Udayavani |

ರಾಯಚೂರು: ರಾಜ್ಯದಲ್ಲಿ ಜನವರಿ ಬಳಿಕ ಕಾಂಗ್ರೆಸ್ ಮಾತ್ರವಲ್ಲ ಎಲ್ಲ ಪಕ್ಷಗಳಲ್ಲೂ ಪಕ್ಷಾಂತರ ಮಾಡುವ ನಾಯಕರಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಶನಿವಾರ ಭವಿಷ್ಯ ನುಡಿದಿದ್ದಾರೆ.

Advertisement

ನಗರದಲ್ಲಿ ‘ಭಾರತ್ ಜೋಡೋ’ ಕಾರ್ಯಕ್ರಮ ನಿಮಿತ್ತ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ಪಕ್ಷದವರು ಬೇರೆ ಕಡೆ ಹೋಗುತ್ತಾರೆ. ಆ ಪಕ್ಷದವರು ನಮ್ಮಲ್ಲಿಗೆ ಬರುತ್ತಾರೆ. ಚುನಾವಣೆ ಬಂದರೆ ಇದೊಂದು ಸಾಮಾನ್ಯ ಪ್ರಕ್ರಿಯೆ. ಆದರೆ,  ಯಾರು ಹೋಗುತ್ತಾರೆ, ಬರುತ್ತಾರೆ ಎಂಬದು ಗೊತ್ತಾಗಬೇಕಾದರೆ ಜನವರಿವರೆಗೂ ಕಾಯಬೇಕು ಎಂದರು.

ಮೀಸಲಾತಿ ಹೆಚ್ಚಿಸಿಕೊಳ್ಳಲು ಸಂವಿಧಾನದಲ್ಲಿ ಅವಕಾಶ ಇದೆ. ಕೇಂದ್ರ ಸರ್ಕಾರ ಈ ಬಗ್ಗೆ ನಿರ್ಧರಿಸಬೇಕು. ಚುನಾವಣೆ ಪೂರ್ವದಲ್ಲಿ ಬಿಜೆಪಿ ಮೀಸಲಾತಿ ಹೆಚ್ಚಿಸಲು ಹೋಗಿರುವುದು ರಾಜಕೀಯ ಲಾಭಕ್ಕಾಗಿ. ಸಚಿವ ಶ್ರೀ ರಾಮುಲು ಅವರ ಒತ್ತಾಯಕ್ಕೆ ಮಾಡಿದ್ದರೆ ಇಷ್ಟು ದಿನ ಯಾಕೆ ಸುಮ್ಮನಿದ್ದರು. ನಮ್ಮ ಸಮಾಜದ ಗುರುಗಳು ಅನೇಕ ತಿಂಗಳುಗಳಿಂದ ಹೋರಾಟ ಮಾಡುತ್ತಿದ್ದಾರೆ. ಮಾಡುವುದಿದ್ದರೆ ಅವರ ಹೋರಾಟಕ್ಕೆ ಮಣಿದು ಮಾಡಬೇಕಿತ್ತು. ಆದರೆ ಕಾಯಿದೆ ರೂಪದಲ್ಲಿಯೆ ಜಾರಿ ಮಾಡಲಿ ಎಂಬುದು ನಮ್ಮ ಒತ್ತಾಸೆಯಾಗಿದೆ. ಆದರೆ, ಬಿಜೆಪಿಯವರು ಸುಗ್ರಿವಾಜ್ಞೆ ಮೂಲಕ ಮಾಡುವ ದಾರಿ ಕಂಡುಕೊಂಡಿದ್ದು, ಅದು ತಾತ್ಕಾಲಿಕ ಪರಿಹಾರವಾಗಲಿದೆ. ಡಿಸೆಂಬರ್ ‌ನಲ್ಲಿ ಅಧಿವೇಶನ ಕರೆದು ಮಾರ್ಚ್ ನಲ್ಲಿ ಕೆಂದ್ರಕ್ಕೆ ಶಿಫಾರಸು ಮಾಡುವುದನ್ನು ಬಿಟ್ಟು ತಕ್ಞಣ ಜಾರಿ ಮಾಡಲಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next