Advertisement

ಚಿಕ್ಕಬಳ್ಳಾಪುರ, ಮಾಗಡಿಯಲ್ಲಿ ರಾಜಕೀಯ ಜಟಾಪಟಿ

06:10 AM Mar 17, 2018 | |

ಚಿಕ್ಕಬಳ್ಳಾಪುರ/ಮಾಗಡಿ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಸಂಘರ್ಷಗಳು ತೀವ್ರಗೊಂಡಿದೆ. ಚಿಂತಾಮಣಿಯಲ್ಲಿ ಇಂದಿರಾ ಕ್ಯಾಂಟೀನ್‌ ಭೂಮಿ ಪೂಜೆಗೆ ತೆರಳಿದ್ದ ಕ್ಷೇತ್ರದ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ, ರಾಜ್ಯ ಕರಕುಶಲ ಅಭಿವೃದ್ಧಿ ನಿಮಗದ ಅಧ್ಯಕ್ಷೆ ವಾಣಿ ಕೃಷ್ಣಾರೆಡ್ಡಿ ಮೇಲೆ ಮಾಜಿ ಶಾಸಕ ಡಾ.ಎಂ.ಸಿ.ಸುಧಾಕರ್‌ ಬೆಂಬಲಿಗರು ಕಲ್ಲು ತೂರಾಟ ನಡೆಸಿದ್ದಾರೆ. ಈ ಹಿಂದೆ ಗುರುಭವನದ ಆವರಣದಲ್ಲಿ ಇಂದಿರಾ ಕ್ಯಾಂಟೀನ್‌ ಆರಂಭಕ್ಕೆ ನಿರ್ಧರಿಸಲಾಗಿತ್ತು. ಸರ್ಕಾರಿ ನೌಕರರ ತೀವ್ರ ವಿರೋಧದಿಂದ ನಗರಸಭೆ ಎಪಿಎಂಸಿ ಮಾರುಕಟ್ಟೆ ಆವರಣಕ್ಕೆ ಕ್ಯಾಂಟೀನ್‌ ಸ್ಥಳಾಂತರಗೊಂಡಿತ್ತು.

Advertisement

ಎಪಿಎಂಸಿಯಿಂದ ಅನುಮತಿ ಪಡೆದು ಶುಕ್ರವಾರ ಭೂಮಿ ಪೂಜೆ ನಿಗದಿಪಡಿಸಿತ್ತು. ಈ ಹಿನ್ನೆಲೆಯಲ್ಲಿ ಜೆ.ಕೆ.ಕೃಷ್ಣಾರೆಡ್ಡಿ ಭೂಮಿ ಪೂಜೆ ನೆರವೇರಿಸಲು ಬಂದಿದ್ದರು. ಆಗ, ಸುಧಾಕರ್‌ ಹಿಡಿತದಲ್ಲಿರುವ ಎಪಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು, ಭೂಮಿ ಪೂಜೆ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದರು. ಈ ವೇಳೆ, ಗಲಾಟೆ ನಡೆಯಿತು. ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.

ಬಿಜೆಪಿ ಕಾರ್ಯಕರ್ತರ ಮಾರಾಮಾರಿ: ರಾಮನಗರ ಜಿಲ್ಲೆ ಮಾಗಡಿಯಲ್ಲಿ ಬಿಜೆಪಿ ಭಿನ್ನಮತ ಸ್ಫೋಟಗೊಂಡಿದ್ದು, ಜಿಲ್ಲಾ ಬಿಜೆಪಿ ಅಧ್ಯಕ್ಷ ಹುಲುವಾಡಿ ದೇವರಾಜು ಮತ್ತು ರಾಷ್ಟ್ರೀಯ ಕಾರ್ಯದರ್ಶಿ ರಾಜು, ರಾಜ್ಯ ಕಾರ್ಯದರ್ಶಿ ಜಗದೀಶ್‌ ಹಿರಮನಿ ಎದುರಲ್ಲೆ ಬಿಜೆಪಿಯ 2 ಬಣಗಳ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ, ಕೆಲವರು ಗಾಯಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next