Advertisement

ರಾಜಕೀಯ ದ್ವೇಶ: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು: ಲಕ್ಷಾಂತರ ಮೀನು ಮಾರಣ ಹೋಮ

11:07 AM Nov 27, 2022 | Team Udayavani |

ಕುಣಿಗಲ್: ರಾಜಕೀಯ ದ್ವೇಷದಿಂದಾಗಿ ಕೆರೆಗೆ ವಿಷ ಹಾಕಿ ಲಕ್ಷಾಂತರ ಮೀನುಗಳ ಮಾರಣಹೋಮ ಮಾಡಿದ ಘಟನೆ ತಾಲೂಕಿನ ಹುತ್ರಿದುರ್ಗ ಹೋಬಳಿಯ ವಡಾಘಟ್ಟ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.

Advertisement

ಜೋಡಿ ಹೊಸಹಳ್ಳಿ ಗ್ರಾಮದ ಚಂದನ್ ಎಂಬವರು ಈ ಕೆರೆಯನ್ನ ಮೀನು ಸಾಕಾಣಿಕೆ ಮಾಡಲೆಂದು ಗುತ್ತಿಗೆಗೆ ಪಡೆಕೊಂಡಿದ್ದರು. ಚಂದನ್ ಪತ್ನಿ ಚೈತ್ರ ಗ್ರಾಮ‌ ಪಂಚಾಯತ್ ಸದಸ್ಯೆಯಾಗಿದ್ದು, ಈ ಕಾರಣ ರಾಜಕೀಯ ದ್ವೇಷಕ್ಕಾಗಿ ಕಿಡಿಗೇಡಿಗಳು ಕೆರೆಗೆ ವಿಷ ಹಾಕಿ ವಿಕೃತಿ ಮೆರೆದಿದ್ದಾರೆ ಎನ್ನಲಾಗಿದೆ.

ಚಂದನ್‌ ಕಳೆದ ಎರಡು ತಿಂಗಳ ಹಿಂದೆ ಬರೋಬ್ಬರಿ ಐದುವರೆ ಲಕ್ಷ ಮೀನಿನ ಮರಿಗಳನ್ನು ಕೆರೆಗೆ ಬಿಟ್ಟಿದ್ದು, ಹಗಲು ರಾತ್ರಿ ಎನ್ನದೆ ನಿದ್ದೆಗೆಟ್ಟು ಮೀನುಗಳನ್ನು ಸಾಕುತ್ತಿದ್ದರು. ಕೆರೆಗೆ ವಿಷ ಮಿಶ್ರಣವಾದ ಹಿನ್ನೆಲೆ ಕೆರೆಯಲ್ಲಿದ್ದ ಮೀನುಗಳೆಲ್ಲಾ ಮಾರಣಹೋಮವಾಗಿರುವುದು ಬೆಳಗ್ಗೆ ಗ್ರಾಮಸ್ಥರು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ, ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next