Advertisement

Political: ಎಚ್‌.ಡಿ.ಕುಮಾರಸ್ವಾಮಿ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುವರು: ನಿಖಿಲ್‌

01:52 AM Sep 05, 2024 | Team Udayavani |

ಕೊಪ್ಪಳ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಅಭ್ಯರ್ಥಿ ಯಾರೆಂದು ನಮ್ಮ ಹಿರಿಯರು ನಿರ್ಧಾರ ಮಾಡಲಿದ್ದಾರೆ. ನಾನೆಲ್ಲೂ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿಲ್ಲ. ಆದರೆ ಎನ್‌ಡಿಎ ಮೈತ್ರಿ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದರು.

Advertisement

ಸುದ್ದಿಗಾರರ ಜತೆ ಮಾತನಾಡಿ ಚನ್ನಪಟ್ಟಣ ಕುಮಾರಸ್ವಾಮಿ ಪ್ರತಿನಿಧಿ ಸಿದ ಕ್ಷೇತ್ರ. ಅವರು ಕೇಂದ್ರ ಸಚಿವರಾಗಿ ದೆಹಲಿಗೆ ಹೋಗಿದ್ದಾರೆ. ನಾನು ನಿರಂತರವಾಗಿ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದೇನೆ. ಅಲ್ಲಿನ ಜನರ ಅಭಿಪ್ರಾಯ ಸಂಗ್ರಹ ಮಾಡಿ ಹಿರಿಯರ ಮುಂದೆ ಇಡುತ್ತೇನೆ. ಟಿಕೆಟ್‌ ಬಗ್ಗೆ ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ ಎಂದರು. ಸಿ.ಪಿ.ಯೋಗೇಶ್ವರ್‌ ದೆಹಲಿಗೂ ಹೋಗಿ ಬಂದಿದ್ದಾರೆ. ಸದ್ಯ ವಿಧಾನ ಪರಿಷತ್‌ ಸದಸ್ಯರಾಗಿದ್ದಾರೆ. ಅವರ ಅಧಿಕಾರವಧಿ ಇನ್ನೂ ಇದೆ. ಸದ್ಯ ನಾನು ಕಾರ್ಯಕರ್ತನಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ ಎಂದರು.

ಎಚ್‌ಡಿಕೆ ಮತ್ತೆ ಮುಖ್ಯಮಂತ್ರಿ:
ಜನಪರ ಕಾಳಜಿ ಇರುವ, ದೂರದೃಷ್ಟಿಯ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರ ಅವಶ್ಯಕತೆ ಈ ರಾಜ್ಯಕ್ಕೆ ಇದೆ. ಮುಂದಿನ ದಿನಗಳಲ್ಲಿ ಅವರು ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದರು. ಕುಮಾರಸ್ವಾಮಿ ರಾಜಕಾರಣದಲ್ಲಿ ಹಿಟ್‌ ಆ್ಯಂಡ್‌ ರನ್‌ ಮಾಡುತ್ತಿಲ್ಲ. ಅವರು ಎಲ್ಲಾ ದಾಖಲಾತಿ ಇಟ್ಟುಕೊಂಡು ಮಾತನಾಡುತ್ತಾರೆ. ಯಾವಾಗ ಏನು ಮಾಡಬೇಕು, ಏನು ಬಿಡುಗಡೆ ಮಾಡಬೇಕೋ ಅದನ್ನು ಬಿಡುತ್ತಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next