Advertisement

ರಾಜಕೀಯ ಮುಖಂಡರ ಸಭೆ ಶೀಘ್ರ: ಖಾದರ್‌

03:30 AM Jul 09, 2017 | |

ಬೆಂಗಳೂರು: ಕರಾವಳಿಯಲ್ಲಿ ಶಾಂತಿ ಕಾಪಾಡಲು ಶೀಘ್ರವೇ ಎಲ್ಲ ರಾಜಕೀಯ ಪಕ್ಷಗಳ ಮುಖಂಡರ ಸಭೆ ಕರೆದು ಚರ್ಚಿಸಲಾಗುವುದು. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಜತೆ ಮಾತನಾಡಿದ್ದೇನೆ ಎಂದು ಸಚಿವ ಖಾದರ್‌ ಹೇಳಿದ್ದಾರೆ.

Advertisement

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರಾವಳಿಯಲ್ಲಿ ಕೆಲವು ಸಮಾಜದ್ರೋಹಿ ಶಕ್ತಿಗಳು ಮತ್ತು ಸಂಘಟನೆಗಳ ಲಾಭದ ಆಲೋಚನೆಯಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ.

ಪರಿಸ್ಥಿತಿಯನ್ನು ನಾವು ಅವಲೋಕಿಸುತ್ತಿದ್ದೇವೆ. ಕೇಂದ್ರ ಸಚಿವ ಸದಾನಂದಗೌಡ ಅವರು ಅನಗತ್ಯವಾಗಿ ಆರೋಪ ಮಾಡುವುದು ಸರಿಯಲ್ಲ. ಆರೋಪ ಮಾಡುವ ಬದಲು ಅವರು ಸಭೆಗೆ ಹಾಜರಾಗಿ ಸರ್ಕಾರ ಏನು ತಪ್ಪು ಮಾಡಿದೆ
ಎನ್ನುವುದನ್ನು ಹೇಳಲಿ. ಶಾಂತಿಗಾಗಿ ನಾವು ಯಾವ ತ್ಯಾಗಕ್ಕೂ ಸಿದಟಛಿವೆಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next