Advertisement

3 ವರ್ಷದ ಬಳಿಕ ರಾಜಕೀಯ ಧ್ರುವೀಕರಣ

10:19 PM Dec 14, 2019 | Team Udayavani |

ಬೆಂಗಳೂರು: 3 ವರ್ಷದ ನಂತರ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣವಾಗಲಿದೆ. ಆಗ ಯಾರು ಯಾವ ಪಕ್ಷದಲ್ಲಿ ಇರುತ್ತಾರೆ ಎನ್ನುವುದು ಗೊತ್ತಾಗಲಿದೆ ಎಂದು ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಈಗ ಜೆಡಿಎಸ್‌ನಲ್ಲಿ ಇದ್ದೇನೆ.

Advertisement

ಮುಂದಿನ ಮೂರು ವರ್ಷದ ನಂತರ ರಾಜಕೀಯ ಯಾವ ದಿಕ್ಕಿಗೆ ತಿರುಗುತ್ತದೆ ನೋಡಿ, ಆಗ ರಾಜಕೀಯ ಭವಿಷ್ಯ ನಿರ್ಧಾರ ಮಾಡುತ್ತೇನೆ ಎಂದು ಹೇಳಿದರು. ಉಪ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಉರುಳಿಸುವುದಿಲ್ಲ ಎಂದು ಜೆಡಿಎಸ್‌ ನಾಯಕರೇ ಹೇಳುತ್ತಿದ್ದರು. ಹಾಗೆ ಆಗಿದೆ. ಯಡಿಯೂರಪ್ಪ ಉತ್ತಮ ಆಡಳಿತ ನೀಡುತ್ತಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next