Advertisement

ಸರಿತಾ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ 

03:15 PM Oct 14, 2017 | Team Udayavani |

ಬೆಂಗಳೂರು: ಸೋಲಾರ್‌ ಹಗರಣದ ಪ್ರಮುಖ ಆರೋಪಿ ಸರಿತಾ ಮಾಡಿರುವ ಲೈಂಗಿಕ ಕಿರುಕುಳ ಆರೋಪದ ಕುರಿತಾಗಿ ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಶನಿವಾರ ಬಿಜೆಪಿಗೆ ತಿರುಗೇಟು ನೀಡಿದ್ದು ಆರೋಪ ಸಾಬೀತಾದರೆ ಸಾರ್ವಜನಿಕ ಜೀವನದಿಂದಲೇ ನಿವೃತ್ತಿಯಾಗುವುದಾಗಿ ಸವಾಲು ಹಾಕಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ವೇಣುಗೋಪಾಲ್‌ ‘ನಾನು 40 ವರ್ಷಗಳಿಂದ ರಾಜಕೀಯ ಜೀವನದಲ್ಲಿದ್ದೇನೆ. ನನ್ನ ಮೇಲೆ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ ಆರೋಪ ಮಾಡಿರುವ ಮಹಿಳೆಯ ಮೇಲೆ 36 ಕ್ರಿಮಿನಲ್‌ ಕೇಸುಗಳಿವೆ. ವಿಪಕ್ಷಗಳು ಆರೋಪ ಮಾಡಿವೆ. ಚುನಾವಣೆಗಳಲ್ಲಿ ನನ್ನನ್ನು ಜನರು ಬೆಂಬಲಿಸಿದ್ದಾರೆ’ ಎಂದರು. 

ಹಗರಣದ ಪ್ರಮುಖ ಆರೋಪಿ ಸರಿತಾ ಅವರು ತಮ್ಮ ಮೇಲೆ ವೇಣು ಗೋಪಾಲ್‌ ಹಾಗೂ ಇತರರು ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ನ್ಯಾ. ಶಿವರಾಜನ್‌ ಆಯೋಗಕ್ಕೆದೂರು ನೀಡಿದ್ದರು. ಪ್ರಕರಣದ ತನಿಖೆಯನ್ನೂ ಹೊಸ ಎಸ್‌ಐಟಿಗೆ ವಹಿಸುವುದಾಗಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ತಿಳಿಸಿದ್ದಾರೆ. 

ಆರೋಪದ ಬಗ್ಗೆ ಕೇಳಿ ಬರುತ್ತಿದ್ದಂತೆ ಬಿಜೆಪಿ ರಾಜ್ಯದಲ್ಲಿ ವೇಣುಗೋಪಾಲ್‌ ವಿರುದ್ಧ ಪ್ರತಿಭಟನೆ ನಡೆಸಿತ್ತು. 

Advertisement

Udayavani is now on Telegram. Click here to join our channel and stay updated with the latest news.

Next