Advertisement

ಬಿಜೆಪಿ ಜತೆಗೆ ಮೈತ್ರಿ ಬದಲು ರಾಜಕೀಯ ನಿವೃತ್ತಿ: ಮಾಯಾವತಿ

02:51 AM Nov 03, 2020 | mahesh |

ಲಕ್ನೋ: ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಳ್ಳುವುದರ ಬದಲಾಗಿ, ರಾಜಕೀಯ ನಿವೃತ್ತಿ ಪಡೆಯುವೆ ಎಂದು ಬಿಎಸ್‌ಪಿ ನಾಯಕಿ ಮಾಯಾವತಿ ಸೋಮವಾರ ತಿಳಿಸಿದ್ದಾರೆ.

Advertisement

ಉತ್ತರ ಪ್ರದೇಶದಲ್ಲಿ ಶೀಘ್ರವೇ ನಡೆಯಲಿರುವ ವಿಧಾನಪರಿಷತ್‌ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಗಳನ್ನು ಸೋಲಿಸುವ ನಿಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿಯನ್ನೂ ಬೆಂಬಲಿಸಲು ಸಿದ್ಧ ಎಂಬ ಹೇಳಿಕೆ ನೀಡಿದ ಬೆನ್ನಲ್ಲೇ ಬಿಎಸ್‌ಪಿ ನಾಯಕಿ ಉಲ್ಟಾ ಹೊಡೆದಿದ್ದಾರೆ. ಮುಸ್ಲಿಂ ಸಮುದಾಯದಕ್ಕೆ ಗೊಂದಲ ಮೂಡಿಸಲು ತಮ್ಮ ಹೇಳಿಕೆಯನ್ನು ಕಾಂಗ್ರೆಸ್‌, ಸಮಾಜವಾದಿ ಪಕ್ಷ ದುರುಪಯೋಗ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ನೇತೃತ್ವದ ಸರಕಾರ 2003ರಲ್ಲಿ ತಮ್ಮ ವಿರುದ್ಧ ಸುಳ್ಳು ಕೇಸು ದಾಖಲಿಸಿತ್ತು. ಈ ಸಂದರ್ಭದಲ್ಲಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ತಮಗೆ ಫೋನ್‌ ಮಾಡಿ ಕಾಂಗ್ರೆಸ್‌ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಅನ್ಯಾಯ ಸರಿಪಡಿಸುವುದಾಗಿ ಹೇಳಿ ದ್ದರು. ಆದರೆ ಅದು ಯಾವ ಕ್ರಮವನ್ನೂ ಕೈಗೊಳ್ಳಲಿಲ್ಲ ಎಂದೂ ಮಾಯಾವತಿ ದೂರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next