Advertisement
ರಾಜಸ್ಥಾನದಲ್ಲಿ ಅತಂತ್ರ ಸ್ಥಿತಿ ಸೃಷ್ಟಿಯಾಗುವ ಸಾಧ್ಯತೆ ಇದ್ದು, ತೆಲಂಗಾಣದಲ್ಲಿ ಫೋಟೋ ಫಿನಿಶ್ ಫಲಿತಾಂಶ ಬರಬಹುದು ಹಾಗೂ ಮಧ್ಯಪ್ರದೇಶದಲ್ಲೂ ಸ್ಪಷ್ಟ ಬಹುಮತ ಯಾರಿಗೆಂದು ಹೇಳಲಾಗದು ಎಂದು ಇತ್ತೀಚೆಗೆ ಪ್ರಕಟವಾದ ಮತಗಟ್ಟೆ ಸಮೀಕ್ಷೆ ಗಳು ತಿಳಿಸಿವೆ. ಹೀಗಾಗಿ ರಾಜಸ್ಥಾನ ಮತ್ತು ಮಧ್ಯಪ್ರದೇಶ ಗಳಲ್ಲಿ ಬಿಜೆಪಿ, ತೆಲಂಗಾಣದಲ್ಲಿ ಬಿಆರ್ಎಸ್ ತನ್ನ ಶಾಸಕರನ್ನು ಖರೀದಿಸಬಹುದು ಎಂಬ ಭೀತಿ ಕಾಂಗ್ರೆಸ್ಗಿದೆ.
ಪಂಚರಾಜ್ಯಗಳ ಪೈಕಿ ಮಧ್ಯಪ್ರದೇಶ, ತೆಲಂಗಾಣ, ರಾಜಸ್ಥಾನ ಮತ್ತು ಛತ್ತೀಸ್ಗಢದ ಫಲಿತಾಂಶ ರವಿವಾರ ಪ್ರಕಟಗೊಳ್ಳಲಿದ್ದು, ಮಿಜೋರಾಂನಲ್ಲಿ ಸೋಮವಾರ ಮತ ಎಣಿಕೆ ನಡೆಯಲಿದೆ. ರವಿವಾರ ಬೆಳಗ್ಗೆ 8ರಿಂದ ಎಣಿಕೆ ಆರಂಭವಾಗಲಿದೆ. ಅಪರಾಹ್ನ 2ರ ವೇಳೆಗೆ ಬಹುತೇಕ ಸ್ಪಷ್ಟ ಚಿತ್ರಣ ಲಭ್ಯವಾಗುವ ಸಾಧ್ಯತೆಯಿದೆ. 2024ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಫಲಿತಾಂಶವು ಕಾಂಗ್ರೆಸ್-ಬಿಜೆಪಿ ಎರಡೂ ಪಕ್ಷಗಳಿಗೂ ಮಹತ್ವದ್ದಾಗಿದೆ. ತೆಲಂಗಾಣಕ್ಕೆ ಕರ್ನಾಟಕದ ನಾಯಕರ ದಂಡು
ಕೈ ನಾಯಕರನ್ನು “ಆಪರೇಶನ್’ ಗುಮ್ಮ ಕಾಡತೊಡಗಿದ್ದು, “ನಮ್ಮ ಅಭ್ಯರ್ಥಿಗಳನ್ನು ಈಗಾಗಲೇ ಬೇರೆ ಬೇರೆ ಪಕ್ಷಗಳು ಸಂಪರ್ಕ ಮಾಡಿವೆ’ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಗೋವಾ ಪರಿಸ್ಥಿತಿ ತೆಲಂಗಾಣದಲ್ಲಿ ಮರುಕಳಿಸದಿರಲಿ ಎಂಬಂತೆ ಕರ್ನಾಟಕದ ನಾಯಕರ ದಂಡೇ ತೆಲಂಗಾಣಕ್ಕೆ ಧಾವಿಸುತ್ತಿದೆ. ಇದೆಲ್ಲದರಿಂದ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಅದರ ಬಿಸಿ ಕರ್ನಾಟಕಕ್ಕೂ ತಾಕುತ್ತಿದೆ. ಈಗಾಗಲೇ ಡಿ.ಕೆ. ಶಿವಕುಮಾರ್ ಮತ್ತು ಗಡಿಭಾಗದ ಕೆಲವು ಶಾಸಕರು ತೆಲಂಗಾಣಕ್ಕೆ ಹಾರಿದ್ದು, ಗೆಲುವು ಖಚಿತ ಎನ್ನಬಹುದಾದ ಅಭ್ಯರ್ಥಿಗಳನ್ನು ಹಿಡಿದಿಡಲು ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಇವರಲ್ಲದೆ ರವಿವಾರ ಬೆಳಗ್ಗೆ ಸಚಿವರಾದ ಕೆ.ಎಚ್. ಮುನಿಯಪ್ಪ, ಈಶ್ವರ ಖಂಡ್ರೆ, ಜಮೀರ್ ಅಹಮ್ಮದ್ ಹಾಗೂ ಕೆಲವು ಶಾಸಕರು ತಮ್ಮ ಬೆಂಬಲಿಗರೊಂದಿಗೆ ತೆಲಂಗಾಣಕ್ಕೆ ದೌಡಾಯಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Related Articles
Advertisement
ಹಲವು ನಾಯಕರಿಗೆ ಅಳಿವು- ಉಳಿವಿನ ಪ್ರಶ್ನೆಈ ಫಲಿತಾಂಶವು ಕೆಲವು ಘಟಾನುಘಟಿ ನಾಯಕರಿಗೆ ಅಳಿವು-ಉಳಿವಿನ ಪ್ರಶ್ನೆಯೂ ಹೌದು. ರಾಜಸ್ಥಾನದಲ್ಲಿ ಹಾಲಿ ಸಿಎಂ ಅಶೋಕ್ ಗೆಹ್ಲೋಟ್ ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದು, ಪಕ್ಷದೊಳಗಿನ ಒಳಜಗಳವೂ ಇವರಿಗೆ ಮುಳ್ಳಾಗುವ ಸಾಧ್ಯತೆಯಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡರೆ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಇಬ್ಬರೂ ಹೈಕಮಾಂಡ್ ವಿಶ್ವಾಸ ಕಳೆದುಕೊಳ್ಳಲಿದ್ದಾರೆ. ಒಂದು ವೇಳೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೇರಿ ಬಿಜೆಪಿ ಸೋಲುಂಡರೆ ಮಾಜಿ ಸಿಎಂ ವಸುಂಧರಾ ರಾಜೇ ಅವರ ರಾಜಕೀಯ ಜೀವನ ಕೊನೆಯಾಯಿತೆಂದೇ ಅರ್ಥ. ಇದೇ ರೀತಿ ಮಧ್ಯಪ್ರದೇಶದ್ದು ಹಾಲಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಮಾಜಿ ಸಿಎಂ ಕಮಲ್ನಾಥ್ ಅವರಿಗೆ ನಿರ್ಣಾಯಕ ಚುನಾವಣೆ. ಸಿಎಂ ಹುದ್ದೆ ಸಿಗಲಿಲ್ಲ ಎಂಬ ಕಾರಣಕ್ಕೆ ಬೇಸರಗೊಂಡು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಜ್ಯೋತಿರಾದಿತ್ಯ ಸಿಂಧಿಯಾ ಈ ಬಾರಿ ಸಿಎಂ ಸ್ಥಾನ ಸಿಗಲಿದೆ ಎಂಬ ಆಸೆಯಲ್ಲಿದ್ದಾರೆ. ಬಿಜೆಪಿ ಸೋತರೆ ಇವರ ಕನಸು ಭಗ್ನವಾಗಲಿದೆ. ಛತ್ತೀಸ್ಗಢದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರ ಕ್ಕೇರಲಿದೆ ಎಂದು ಸಮೀಕ್ಷೆಗಳು ಹೇಳಿದ್ದು, ಇದು ನಿಜವಾದರೆ ಬಿಜೆಪಿಯ ಡಾ| ರಮಣ್ ಸಿಂಗ್ ಅವರ ರಾಜಕೀಯ ಜೀವನ ಅಂತ್ಯವಾಗುವ ಸಾಧ್ಯತೆಯೇ ಹೆಚ್ಚು. ತೆಲಂಗಾಣದಲ್ಲಿ ಬಿಆರ್ಎಸ್ ಅನ್ನು ಮಣಿಸುವಲ್ಲಿ ಕಾಂಗ್ರೆಸ್ ಯಶಸ್ವಿ ಯಾದರೆ ಮುಖಭಂಗ ಅನುಭವಿಸುವುದರ ಜತೆಗೆ ರಾಷ್ಟ್ರ ರಾಜಕಾರಣಕ್ಕೆ ತೆರಳುವ ಕೆ. ಚಂದ್ರಶೇಖರ್ ರಾವ್ ಕನಸು ಕಮರಲಿದೆ.