Advertisement

ಅಭಿವೃದ್ಧಿಯಲ್ಲಿ ರಾಜಕೀಯ ಮಾಡುವುದಿಲ್ಲ

01:24 PM Jun 20, 2019 | Team Udayavani |

ಸಕಲೇಶಪುರ: ಜನ ಮತ ನೀಡಲಿ ಬಿಡಲಿ ಅಭಿವೃದ್ಧಿ ವಿಚಾರದಲ್ಲಿ ಎಂದಿಗೂ ರಾಜಕೀಯ ಮಾಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಹೇಳಿದರು.

Advertisement

ತಾಲೂಕಿನ ಹೆತ್ತೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡಲಾದ 1×8 ಎಂ.ವಿ.ಎ 66/11 ಕೆ.ವಿ ವಿದ್ಯುತ್‌ ಉಪ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಹಿಂದೆ ಜೆಡಿಎಸ್‌ ಹಾಗೂ ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಸಚಿವನಾಗಿದ್ದ ವೇಳೆಯಲ್ಲಿ ಈ ಭಾಗದ ಜನರ ವಿದ್ಯುತ್‌ ಸಮಸ್ಯೆಯನ್ನು ಕಂಡು ಹೆತ್ತೂರಿಗೆ ವಿದ್ಯುತ್‌ ಉಪಕೇಂದ್ರವನ್ನು ಮಂಜೂರು ಮಾಡಿಸಿದ್ದೆ. ಆದರೆ ನಾವು ಅಧಿಕಾರ ದಲ್ಲಿರದ ಕಾರಣ ಕಾಮಗಾರಿ ಮುಗಿಯುವುದು ವಿಳಂಬವಾಗಿದೆ. ದೇವೇೕಗೌಡರಿಗೆ ರಾಜಕೀಯ ವಾಗಿ ಪುನರ್‌ ಶಕ್ತಿ ನೀಡಿದ್ದು ಹೆತ್ತೂರು ಭಾಗದ ಜನ ಈ ಹಿನ್ನೆಲೆಯಲ್ಲಿ ಇಲ್ಲಿನ ಜನರ ಋಣ ನಾನು ಎಂದಿಗೂ ಮರೆಯುವುದಿಲ್ಲ ಎಂದರು.

ಉಚ್ಚಂಗಿ ಗ್ರಾಮದಲ್ಲೂ ಸಹ ಇದೇ ರೀತಿಯ ವಿದ್ಯುತ್‌ ಉಪಕೇಂದ್ರವನ್ನು ಮಾಡಲು ಯೋಜಿ ಸಿದ್ದು ಕೆಪಿಟಿಸಿಎಲ್ ಅಧಿಕಾರಿಗಳು ಯೋಜನೆಯ ನೀಲ ನಕ್ಷೆ ತಯಾರಿಸಬೇಕೆಂದರು.

ರೈತರ ಸಮಸ್ಯೆ ನಿವಾರಿಸಲು ಕ್ರಮ: ಬೆಳೆಗಾರರ ಸಮಸ್ಯೆ ಶಾಶ್ವತವಾಗಿ ಬಗೆಹರಿಸಲು ದೇವೇ ಗೌಡರು ಪ್ರಾಮಾಣಿಕವಾಗಿ ಪ್ರಯತ್ನ ಮಾಡಿ ದ್ದರು. ಈ ಹಿಂದೆ ಕೇಂದ್ರದಲ್ಲಿ ವಾಣಿಜ್ಯ ಸಚಿವ ರಾಗಿದ್ದ ಸುರೇಶ್‌ ಪ್ರಭು ಅವರಿಗೆ ಮನವಿ ಸಲ್ಲಿಸಿದ್ದೆವು. ಅವರು ಸಮಸ್ಯೆಯನ್ನು ಬಗೆಹರಿ ಸಲು ಆಸಕ್ತಿ ತೋರಿದ್ದರು. ಆದರೆ ಲೋಕಸಭಾ ಚುನಾವಣೆ ಘೋಷಣೆಯಗಿದ್ದರಿಂದ ಸಮಸ್ಯೆ ಬಗೆಹರಿಯಲಿಲ್ಲ. ಕಾಡಾನೆ ಸಮಸ್ಯೆ ಶಾಶ್ವತವಾಗಿ ಬಗೆಹರಿಸಲು ಹಲವು ಬಾರಿ ಕೇಂದ್ರ ಸರ್ಕಾರ ಮನವಿ ಮಾಡಿದರೂ ಸ್ಪಂದಿಸದ ಕಾರಣ ಯಾವುದೇ ಪ್ರಯೋಜನವಾಗಿಲ್ಲ. ಮುಂದಿನ ದಿನಗಳಲ್ಲಿ ಕಾಡಾನೆ ಸಮಸ್ಯೆಯನ್ನು ಬಗೆಹರಿಸಲು ಕುಮಾರಣ್ಣನ ನೇತೃತ್ವದಲ್ಲಿ ಕ್ರಮ ಕೈಗೊಳ್ಳುತ್ತೇವೆ. ರೈತರಿಗೆ ಯಾವ ರೀತಿಯಲ್ಲೂ ತೊಂದರೆ ಯಾಗದಂತೆ ಉತ್ತಮ ಯೋಜನೆ ಗಳನ್ನು ರೂಪಿಸುವಂತೆ ಸಿಎಂ ಕುಮಾರಣ್ಣ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಅಧಿಕಾರಿಗಳು ಸಹ ರೈತಪರ ವಾಗಿ ಕಾರ್ಯನಿರ್ವಹಿಸಬೇಕು ಎಂದರು.

ಗುಣಮಟ್ಟದ ವಿದ್ಯುತ್‌ ಸರಬರಾಜು: ಶಾಸಕ ಎಚ್.ಕೆ. ಕುಮಾರಸ್ವಾಮಿ ಮಾತನಾಡಿ, ಹೆತ್ತೂರು ಸುತ್ತಮುತ್ತಲಿನ ಗ್ರಾಮಗಳಾದ ಐಗೂರು, ಬ್ಯಾಕರವಳ್ಳಿ, ವನಗೂರು, ಹಾಡ್ಯ ಹಾಗೂ ಹೊಂಗಡಹಳ್ಳ ಸೇರಿದಂತೆ ಇತರ ಕಡೆಗಳಿಗೆ ಉತ್ತಮ ಗುಣಮಟ್ಟದ ವಿದ್ಯುತ್‌ ಸರಬರಾಜು ಮಾಡಲು ಈ ವಿದ್ಯುತ್‌ ಸರಬರಾಜು ಕೇಂದ್ರ ಸಹಾಯಕಾರಿಯಾಗಿದೆ. ಜೊತೆಗೆ ಯಸಳೂರು ವಿದ್ಯುತ್‌ ವಿತರಣಾ ಕೇಂದ್ರ ಹೊರೆಯನ್ನು ಕಡಿಮೆ ಮಾಡುವುದರಿಂದ 11 ಕೆ.ವಿ. ಮಾರ್ಗ ದಲ್ಲಾಗುವ ವಿದ್ಯುತ್‌ ನಷ್ಟವೂ ಕಡಿಮೆಯಾಗುತ್ತದೆ ಎಂದರು.

Advertisement

ಈ ಭಾಗದಲ್ಲಿ ಮಳೆ ಬಹಳ ಕಡಿಮೆ ಯಾಗಿರುವುದು ಆತಂಕವಾಗಿದೆ. ಕೊಡಗಿಗೆ ಹೇಗೆ ಅಭಿವೃದ್ಧಿ ಪ್ರಾಧಿಕಾರ ಮಾಡಿದ್ದೀರೋ ಹಾಗೆಯೆ ಸಕಲೇಶಪುರ ಅಭಿವೃದ್ಧಿ ಪ್ರಾಧಿಕಾರ ಮಾಡಲು ಮುಖ್ಯಮಂತ್ರಿಗಳು ಗಮನಹರಿಸ ಬೇಕು. ಸಕಲೇಶಪುರ ತಾಲೂಕಿನಲ್ಲಿ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲಾಗಿದೆ ಎಂದು ಶಾಸಕರು ಒತ್ತಾಯಿಸಿದರು.

ನೂತನ ಲೋಕ ಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಅವರು ಈ ಭಾಗದ ಅಭಿವೃದ್ಧಿಗೆ ಶ್ರಮಿಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

ಶಿಷ್ಟಾಚಾರ ಉಲ್ಲಂಘನೆ: ಜಿಪಂ ಸದಸ್ಯೆ ಉಜ್ಮಾ ರುಜ್ವಿ ಮಾತನಾಡಿ, ಈ ಭಾಗದ ಜನರ ಅನು ಕೂಲಕ್ಕಾಗಿ ತಮ್ಮ ಪತಿ ಸುದರ್ಶನ್‌ ಅವರು 2.20 ಎಕರೆ ಜಾಗವನ್ನು ಕೆಪಿಟಿಸಿಎಲ್ಗೆ ನೀಡಿದ್ದರು. ಆದರೆ ಇಂದಿನ ಉದ್ಘಾಟನಾ ಕಾರ್ಯಕ್ರಮಕ್ಕೆ ಈ ಭಾಗದ ಜನಪ್ರತಿನಿಧಿಯಾದ ನನ್ನ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಕೆಪಿಟಿಸಿಎಲ್ ಅಧಿಕಾರಿ ಗಳು ಹಾಕದೆ ಅಪಮಾನವೆಸಗಿದ್ದಾರೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ ರೇವಣ್ಣ ನವರು ನನ್ನ ಮನವೊಲಿಸಿ ಇಲ್ಲಿಗೆ ಕರೆದುಕೊಂಡು ಬಂದಿದ್ದಾರೆ. ಇಲ್ಲದಿದ್ದಲ್ಲಿ ನಾನು ಇಲ್ಲಿಗೆ ಬರುತ್ತಿರಲಿಲ್ಲ ಎಂದು ಹೇಳಿದರು.

ಈ ಸಂದ‌ರ್ಭದಲ್ಲಿ ಹೆತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಹಾದೇವಮ್ಮ, ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ಮುಖ್ಯ ಅಭಿಯಂತರ ಕೊಟ್ರೇಶ್‌, ಮುಖ್ಯ ಅಧೀಕ್ಷಕ ಉಮೇಶ್‌, ಕಾರ್ಯಪಾಲಕ ಅಭಿಯಂತರ ಲೋಕೇಶ್‌, ಉಪ ಅಭಿಯಂತರ ರಂಜನ್‌, ಜಾತ್ಯತೀತ ಜನತಾದಳ ಮುಖಂಡರಾದ ಸಚಿನ್‌ ಪ್ರಸಾದ್‌, ನಾಗರಾಜ್‌, ದಿವಾಕರ್‌, ರಾಜೇಗೌಡ ಮುಂತಾದವರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next