Advertisement

Politics: ಸೋಮಣ್ಣಗೆ ಕೇಳಿದ ಖಾತೆ ಕೊಟ್ಟಿದ್ದು ಬಿಎಸ್‌ವೈ ಅಪರಾಧವೇ?-ಎಂ.ಪಿ. ರೇಣುಕಾಚಾರ್ಯ

12:17 AM Nov 29, 2023 | Team Udayavani |

ತುಮಕೂರು: ನೀವು ಚುನಾವಣೆಯಲ್ಲಿ ಸೋತು ಎಲ್ಲೋ ಇದ್ದಾಗ, ನಿಮ್ಮ ಕಣ್ಣೀರು ಒರೆಸಿ ವಿಧಾನ ಪರಿಷತ್‌ ಸದಸ್ಯರನ್ನಾಗಿ ಮಾಡಿ ಕೇಳಿದ್ದ ಖಾತೆ ಕೊಟ್ಟಿದ್ದು ಯಡಿಯೂರಪ್ಪ ಮಾಡಿದ ಅಪರಾಧವೇ? ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರು ವಿ. ಸೋಮಣ್ಣ ಅವರನ್ನು ಪ್ರಶ್ನಿಸಿದರು.

Advertisement

ಶ್ರೀಕ್ಷೇತ್ರ ಸಿದ್ಧಗಂಗಾ ಮಠಕ್ಕೆ ಮಂಗಳವಾರ ಭೇಟಿ ನೀಡಿ ಹಿರಿಯ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿ ಅನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ಸಿದ್ದರಾಮಯ್ಯ ವಿರುದ್ಧ ನಿಂತು ಗೆದ್ದರೆ ಮುಖ್ಯಮಂತ್ರಿ ಆಗುತ್ತೇನೆ ಎಂಬ ಭ್ರಮೆಯಲ್ಲಿ ವಿ. ಸೋಮಣ್ಣ ಕಳೆದ ಬಾರಿ ಸ್ಪರ್ಧೆಗೆ ಒಪ್ಪಿಕೊಂಡಿದ್ದರು. ಅವತ್ತೇ ಅವರು ಈ ಮಾತು ಹೇಳಬೇಕಾಗಿತ್ತು. ಸೋತ ಅನಂತರ ಯಡಿಯೂರಪ್ಪ ವಿರುದ್ಧ ಮಾತನಾಡುವುದು ಸರಿಯಲ್ಲ ಎಂದರು.

ಬಿಜೆಪಿಯಲ್ಲಿ ನನ್ನನ್ನೂ ಸೇರಿದಂತೆ ಪಾರ್ಟಿ ಕಟ್ಟಿದ ಎಲ್ಲ ಹಿರಿಯ ಶಾಸಕರಿಗೂ ಅನ್ಯಾಯವಾಗಿದೆ. ನಾನು ಕಾಂಗ್ರೆಸ್‌ ಪಕ್ಷದಲ್ಲಿ ಇದ್ದಿದ್ದರೆ ಮಂತ್ರಿಯಾಗಿರುತ್ತಿದ್ದೆ ಎಂದು ಕೆಲವರ ಬಳಿ ಸೋಮಣ್ಣ ಮಾತನಾಡಿದ್ದಾರೆ. ಕಾಂಗ್ರೆಸ್‌ನವರು ಇವರಿಗೆ ಏನು ಸ್ಥಾನಮಾನ ಕೊಟ್ಟಿದ್ದರು? ಯಡಿಯೂರಪ್ಪ ಎಲ್ಲ ಸ್ಥಾನಮಾನ ನೀಡಿ ಗೌರವ ನೀಡಿದ್ದಾರೆ. ಎರಡೂ ಕಡೆ ಸ್ಪರ್ಧಿಸಿ ಎಂದು ಯಡಿಯೂರಪ್ಪ ಹೇಳಿದ್ದರೇ? ಮೇಲಿನವರು ಹೇಳಿದ್ದು. ಯಾವ ನೈತಿಕತೆ ಇಟ್ಟುಕೊಂಡು ಯಡಿಯೂರಪ್ಪನವರ ಬಗ್ಗೆ ಮಾತನಾಡುತ್ತೀರಿ ಎಂದು ಕಿಡಿಕಾರಿದರು.

 

Advertisement

Udayavani is now on Telegram. Click here to join our channel and stay updated with the latest news.

Next