Advertisement

ಸದ್ಯದ ಪರಿಸ್ಥಿತಿಯಲ್ಲಿ ರಾಜಕಾರಣ ಸರಿಯಲ್ಲ: ಅಶೋಕ್‌

08:55 PM May 30, 2020 | Sriram |

ಬೆಂಗಳೂರು: ಸದ್ಯದ ಪರಿಸ್ಥಿತಿಯಲ್ಲಿ ರಾಜಕಾರಣಕ್ಕಿಂತ ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಶ್ರಮಿಸಬೇಕಿದೆ. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಯುವಕರು ನಾಚುವಂತೆ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಕೋವಿಡ್-19 ನಿಯಂತ್ರಣ ಸಂದರ್ಭದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಸಚಿವ ಆರ್‌.ಅಶೋಕ್‌ ಹೇಳಿದರು.

Advertisement

ಮುಖ್ಯಮಂತ್ರಿಗಳ ಗೃಹ ಕಚೇರಿ “ಕೃಷ್ಣಾ’ದಲ್ಲಿ ಶನಿವಾರ ಮಾತನಾಡಿದ ಅವರು, ಪಕ್ಷದಲ್ಲಿ ಭಿನ್ನಮತ ನಡೆಯುತ್ತಿದೆ ಎಂಬುದು ಸುಳ್ಳು. ಯಾರೋ ನಾಲ್ಕು ಜನ ಸೇರಿ ಊಟ ಮಾಡಿದರೆ ಅದು ಭಿನ್ನಮತ ಅಲ್ಲ. ಬಿ.ಎಸ್‌. ಯಡಿಯೂರಪ್ಪ ಅವರೇ ನಮ್ಮ ನಾಯಕರು ಎಂದು ಎಲ್ಲರೂ ಹೇಳಿದ್ದಾರೆ ಎಂದು ತಿಳಿಸಿದರು.

ರಾಜಾಹುಲಿಗೆ ನಿವೃತ್ತಿ ಎಂಬುದಿಲ್ಲ
ಮುಂದಿನ ಮೂರು ವರ್ಷ ಬಿ.ಎಸ್‌.ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ. ಕಾಂಗ್ರೆಸ್‌ ಹಗಲುಗನಸು ಕಾಣುವುದನ್ನು ಬೇಡ. ಕಾಂಗ್ರೆಸ್‌ನ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದ್ದು, ಅದನ್ನು ನೋಡಿಕೊಳ್ಳಲಿ. ಬದಲಿಗೆ ನಮ್ಮ ಬಗ್ಗೆ ಟೀಕಿಸುವುದು ಬೇಡ. ಕೋವಿಡ್-19 ಸೋಂಕು ನಿಯಂತ್ರಣ ಮುಗಿಯುವವರಗೆ ಎಲ್ಲ ಶಾಸಕರು ಸುಮ್ಮನಿರುವುದು ಒಳಿತು. ರಾಜಾಹುಲಿಗೆ ನಿವೃತ್ತಿ ಎನ್ನೋದು ಬರೋದಿಲ್ಲ ಎಂದು ಹೇಳಿದರು.

 

Advertisement

Udayavani is now on Telegram. Click here to join our channel and stay updated with the latest news.

Next