Advertisement

ಬಿಜೆಪಿಯದ್ದು ಭಾವನೆ ಮೇಲೆ ರಾಜಕಾರಣ

06:14 AM Mar 15, 2019 | Team Udayavani |

ಬೆಂಗಳೂರು: ಬಿಜೆಪಿಯವರು ಐದು ವರ್ಷದಲ್ಲಿ ಯಾವುದೇ ಸಾಧನೆ ಮಾಡದೇ, ಭಾವನಾತ್ಮಕ ವಿಷಯಗಳ ಮೇಲೆ ಮತಯಾಚನೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಆರೋಪಿಸಿದ್ದಾರೆ.

Advertisement

ಪಕ್ಷದ ಸಂಶೋಧನಾ ವಿಭಾಗ ಹೊರ ತಂದಿರುವ ಬಿಜೆಪಿ ಸರ್ಕಾರದ ವೈಫ‌ಲ್ಯಗಳು ಹಾಗೂ ಯುಪಿಎ ಮತ್ತು ಸಿದ್ದರಾಮಯ್ಯ ಸರ್ಕಾರದ ಸಾಧನೆಗಳ ಕೈಪಿಡಿಯನ್ನು ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಬಿಡುಗಡೆಗೊಳಿಸಿ ಮಾತನಾಡಿದರು. ಬಿಜೆಪಿ ಐದು ವರ್ಷ ಬರೀ ಸುಳ್ಳು ಹೇಳುವುದರಲ್ಲಿಯೇ ಕಾಲ ಕಳೆದಿದೆ ಎಂದು ದೂರಿದರು.

ಕಳೆದ ಚುನಾವಣೆಯಲ್ಲಿ ರಾಮ ಮಂದಿರದ ಹೆಸರಿನಲ್ಲಿ ರಾಜಕಾರಣ ಮಾಡಿದ್ದರು. ಈ ಬಾರಿ ರಾಷ್ಟ್ರೀಯತೆಯ ಮೇಲೆ ರಾಜಕಾರಣ ಮಾಡುತ್ತಿದ್ದಾರೆ. ಲೋಕಪಾಲ್‌ ಮಸೂದೆ ಮಂಡಿಸದೇ ವಿಳಂಬ ಧೋರಣೆ ಅನುಸರಿಸಿರುವ ಕೇಂದ್ರ ಸರ್ಕಾರ ಭ್ರಷ್ಟಾಚಾರ ತಡೆಗೆ ಯಾವುದೇ ಪ್ರಯತ್ನ ಮಾಡಿಲ್ಲ ಎಂದರು.

ಕಾಂಗ್ರೆಸ್‌ ಕೈಪಿಡಿಯಲ್ಲಿ 2004 ರಿಂದ 14 ರ ವರೆಗಿನ ಯುಪಿಎ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದ ಪ್ರಮುಖ ಯೋಜನೆಗಳ ಮಾಹಿತಿ. ಬಿಜೆಪಿ ಪೊಳ್ಳು ಭರವಸೆ ಎಂಬುದರ ಮಾಹಿತಿ ನೀಡಲಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ತಂದ ಯೋಜನೆಗಳ ಬಗ್ಗೆ ವಿವರ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next