Advertisement

Ponnampet: ಹುಲಿಯ ಸೆರೆಗೆ ಹೋದ ಅರಣ್ಯ ಸಿಬಂದಿ ಮೇಲೆ ಹೆಜ್ಜೇನು ದಾಳಿ

01:16 AM Apr 12, 2024 | Team Udayavani |

ಮಡಿಕೇರಿ: ಹುಲಿಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಸಂದರ್ಭ ಅರಣ್ಯ ಇಲಾಖೆ ಸಿಬಂದಿ ಹಾಗೂ ಸಾಕಾನೆ ಮೇಲೆ ಹೆಜ್ಜೇನು ದಾಳಿ ಮಾಡಿದ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಹರಿಹರ ಗ್ರಾಮದಲ್ಲಿ ಸಂಭವಿಸಿದೆ.

Advertisement

ಅರಣ್ಯಾಧಿಕಾರಿ ಕನ್ನಂಡ ರಂಜನ್‌, ಮಾವುತ ಕುಳ್ಳ ಹಾಗೂ ಸಾಕಾನೆ ಭೀಮನ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, ರಂಜನ್‌ ಅವರಿಗೆ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಉಳಿದವರು ಚೇತರಿಸಿಕೊಂಡಿದ್ದಾರೆ. ಹೆಜ್ಜೇನು ದಾಳಿ ಸಂದರ್ಭ ಸಾಕಾನೆ ಭೀಮ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿತು.

ಬುಧವಾರ ಹರಿಹರ ಗ್ರಾಮದ ಕೆರೆಯಲ್ಲಿ ಹುಲಿಯೊಂದು ನೀರು ಕುಡಿದು ಕಾಡಿಗೆ ಹೋಗುವ ದೃಶ್ಯ ವೈರಲ್‌ ಆಗಿತ್ತು. ಸುತ್ತಮುತ್ತಲ ಗ್ರಾಮಸ್ಥರು ಹುಲಿ ಇರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು. ಗುರುವಾರ ಸ್ಥಳಕ್ಕೆ ಭೇಟಿ ನೀಡಿದ್ದ ಅರಣ್ಯ ಇಲಾಖೆಯ ಸಿಬಂದಿ ಹುಲಿಯ ಚಲನವಲನ ಪತ್ತೆಹಚ್ಚಿ ಸಾಕಾನೆಗಳಾದ ಭೀಮ ಹಾಗೂ ಮಹೇಂದ್ರನ ಸಹಾಯದಿಂದ ಸೆರೆ ಹಿಡಿಯಲು ಮುಂದಾಗಿದ್ದರು. ಆಗ ದಿಢೀರ್‌ ಆಗಿ ಹೆಜ್ಜೇನು ದಾಳಿ ಮಾಡಿತು. ಹುಲಿ ಸೆರೆ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಗಾಯಗೊಂಡ ಹುಲಿ ಗ್ರಾಮಕ್ಕೆ ಬಂದಿರಬಹುದೆಂದು ಶಂಕಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next