Advertisement

ಕಳಪೆ ಗುಣಮಟ್ಟದ ಆಹಾರ ಪೂರೈಕೆ

09:48 AM Aug 02, 2020 | Suhan S |

ಗೌರಿಬಿದನೂರು: ನಗರದ ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿಯ ನಿರ್ಲಕ್ಷ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಕೋವಿಡ್ ಸೋಂಕಿತರಿಗೆ ಗುಣಮಟ್ಟದ ಆಹಾರ ದೊರೆಯುತ್ತಿಲ್ಲ. ಈ ಕುರಿತು ಪ್ರಶ್ನಿಸಿದರೆ ಉಡಾಫೆ ಉತ್ತರ ನೀಡುತ್ತಿದ್ದಾರೆ ಎಂದು ನಗರ ಬಿಜೆಪಿ ಘಟಕದ ಅಧ್ಯಕ್ಷ ಎ.ಮೋಹನ್‌ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

Advertisement

ಸಾಮಾನ್ಯ ರೋಗಿಗಳಿಗೆ ನೀಡುವ ಆಹಾರವನ್ನೇ ಕೋವಿಡ್‌ ರೋಗಿಗಳಿಗೆ ನೀಡಲಾಗುತ್ತಿದೆ. ಸೋಂಕಿತರಿಗೆ ಪೌಷ್ಟಿಕ ಆಹಾರವೂ ಔಷಧವಾಗಿದೆ. ಅದನ್ನು ಕಡೆಗಣಿಸಿ ಕಳಪೆ ಗುಣಮಟ್ಟದ ಆಹಾರ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಈ ಬಗ್ಗೆ ವೈದ್ಯಾಧಿಕಾರಿ ಡಾ.ಶ್ರೀನಿವಾಸ್‌ ಅವರನ್ನು ಪ್ರಶ್ನಿಸಿದರೆ ನಮಗೆ ಜಿಲ್ಲಾಧಿಕಾರಿ ಹಣ ಮಂಜೂರು ಮಾಡಿಲ್ಲ, ಡಿಹೆಚ್‌ಒ ಅವರಿಂದ ಮಂಜೂರು ಮಾಡಿಸಿಕೊಳ್ಳಿ ಎಂದರೆ ನಮಗೆ ಟೈಮಿಲ್ಲ ಎಂದು ಬೇಜವಾಬ್ದಾರಿ ಉತ್ತರ ನೀಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಸರ್ಕಾರ ಎಲ್ಲ ಅನುಕೂಲ ಮಾಡಿದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ರೋಗಿಗಳು ಹಸಿವಿನಿಂದ ನರಳುವಂತಾಗಿದೆ ಎಂದು ದೂರಿದರು. ನಗರ ಕಾರ್ಯದರ್ಶಿ ಸಿ.ಮೃತ್ಯುಂಜಯ ಮಾತನಾಡಿ, ಕೋವಿಡ್‌ ರೋಗಿಗಳಿಗೆ ನಿಗದಿತ ಆಹಾರ ನೀಡಬೇಕೆಂದು ಸರ್ಕಾರ ಸೂಚಿಸಿದೆ. ಜಿಲ್ಲಾಧಿಕಾರಿ ಈ ಕುರಿತು ಗಮನಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next