Advertisement

ಕಳಪೆ ರಸ್ತೆ: ಗುತ್ತಿಗೆದಾರನಿಗೆ ಮೂರು ಲಕ್ಷ ದಂಡ ವಿಧಿಸಿದ ಬಿಬಿಎಂಪಿ

11:24 AM Jun 25, 2022 | Team Udayavani |

ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ ಸಂದರ್ಭದಲ್ಲಿ ಕಳಪೆ‌ ರಸ್ತೆ ನಿರ್ಮಾಣ ಮಾಡಿದ ಗುತ್ತಿಗೆದಾರನಿಗೆ ಬಿಬಿಎಂಪಿ ಮೂರು ಲಕ್ಷ ರೂ. ದಂಡ ವಿಧಿಸಿದೆ.

Advertisement

ಮೋದಿ ಆಗಮನ ಸಂದರ್ಭದಲ್ಲಿ ನಿರ್ಮಿಸಿದ್ದ ರಸ್ತೆ ಮೂರೇ ದಿನದಲ್ಲಿ‌‌‌ ಕಿತ್ತು ಹೋಗಿದ್ದ ಬಗ್ಗೆ ಪ್ರಧಾನಿ‌ ಕಾರ್ಯಾಲಯ ಸ್ಪಷ್ಟನೆ ಕೇಳಿತ್ತು. ಇದು ಕಾಮನ್ ಮ್ಯಾನ್ ಸಿಎಂ ಎಂದು ತಮ್ಮನ್ನು ತಾವೇ ಕರೆದುಕೊಳ್ಳುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ತೀವ್ರ ಮುಜುಗರ ಸೃಷ್ಟಿಸಿತ್ತು.

ಇದನ್ನೂ ಓದಿ:ಪ್ಲಾಸ್ಟಿಕ್‌ ತ್ಯಾಜ್ಯದಿಂದ ಪೆಟ್ರೋಲ್‌ ತಯಾರಿಕೆ! ದಾವಣಗೆರೆ ವಿದ್ಯಾರ್ಥಿಗಳ ಸಂಶೋಧನೆ

ಈ ಹಿನ್ನೆಲೆಯಲ್ಲಿ ಕಳಪೆ ರಸ್ತೆ ನಿರ್ಮಿಸಿದ್ದ ಗುತ್ತಿಗೆದಾರನಿಗೆ ಬಿಬಿಎಂಪಿ ಮೂರು ಲಕ್ಷ ರೂ. ದಂಡ ವಿಧಿಸಿದೆ. ಮೂವರು ಅಧಿಕಾರಿಗಳಿಗೆ ಮುಖ್ಯ ಎಂಜಿನಿಯರ್ ಪ್ರಹ್ಲಾದ್ ಅವರು ಶೋಕಾಸ್ ನೋಟಿಸ್ ಜಾರಿ ಮಾಡಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

Advertisement

ನೋಟಿಸ್ ಜಾರಿ ಮಾಡಿದ ಬೆನ್ನಲ್ಲೆ ಗುತ್ತಿಗೆದಾರ ರಮೇಶ್ ಎಂಬುವವರಿಗೆ ಬಿಬಿಎಂಪಿ ದಂಡ ವಿಧಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next