Advertisement

ಕೇರಳದಲ್ಲಿ ಮತ್ತೆ ಐವರಿಗೆ ಕೊರೊನಾ ಸೋಂಕು: ದೇಶದಲ್ಲಿ ವೈರಾಣುಪೀಡಿತರ ಸಂಖ್ಯೆ 39ಕ್ಕೆ ಏರಿಕೆ

11:44 PM Mar 20, 2020 | Mithun PG |

ತಿರುವನಂತಪುರಂ: ಕೇರಳದಲ್ಲಿ ಮತ್ತೆ ಐವರಿಗೆ ಕೊರೊನಾ ಸೋಂಕು ತಗುಲಿರುವ ಕುರಿತು ಆರೋಗ್ಯ ಸಚಿವೆ ಕೆ.ಕೆ ಶೈಲಜಾ ಖಚಿತಪಡಿಸಿದ್ದಾರೆ. ಆ ಮೂಲಕ ದೇಶದಲ್ಲಿ ಒಟ್ಟಾರೆಯಾಗಿ 39 ಜನರಿಗೆ ವೈರಾಣು ತಗುಲಿರುವುದು ಧೃಡಪಟ್ಟಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

Advertisement

ಇತ್ತೀಚಿಗಷ್ಟೇ ಕೇರಳದ ಮೂವರು ವ್ಯಕ್ತಿಗಳು ಇಟಲಿಗೆ ತೆರಳಿ ಹಿಂದಿರುಗಿದ್ದರು. ಇವರಿಂದ ಇಬ್ಬರು ಸಂಬಂಧಿಕರಿಗೂ ಕೂಡ ಸೋಂಕು ತಗುಲಿದೆ ಎಂದು ಆರೋಗ್ಯ ಸಚಿವೆ ಶೈಲಜಾ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ. ಇಟಲಿಗೆ ತೆರಳಿದ್ದ ವ್ಯಕ್ತಿಗಳು ತಮ್ಮ ಪ್ರಯಾಣದ ವಿವರವನ್ನು ಸಮರ್ಪಕವಾಗಿ ನೀಡಿರಲಿಲ್ಲ. ಆರೋಗ್ಯ ತಪಾಸಣೆಗೂ ನಿರಾಕರಿಸಿದ್ದರು. ಆದರೆ ಮನವೊಲಿಕೆಯ ನಂತರ ಪರೀಕ್ಷೆಗೊಳಪಡಿಸಿದಾಗ ಸೋಂಕು ಇರುವುದು ಪತ್ತೆಯಾಯಿತು ಎಂದಿದ್ದಾರೆ.

ತಿಂಗಳ ಹಿಂದಷ್ಟೇ ಕೇರಳದಲ್ಲಿ ಮೂವರು ವ್ಯಕ್ತಿಗಳಿಗೆ ಸೋಂಕು ತಗುಲಿರುವುದು ಖಚಿತಗೊಂಡಿತ್ತು.ಇದು ದೇಶದಲ್ಲಿ ದಾಖಲಾದ ಮೊದಲ 3 ಪ್ರಕರಣವಾಗಿತ್ತು.  ಆ ಬಳಿಕ  ಸೂಕ್ತ ಚಿಕಿತ್ಸೆಯಿಂದ ಆ ಮೂವರು  ಸೋಂಕಿನಿಂದ ಪಾರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next