Advertisement

Ram Mandir: “ಗೋಧ್ರಾ ಮಾದರಿ ಘಟನೆ” ಸಾಧ್ಯತೆ: ಉದ್ಧವ್‌ ಠಾಕ್ರೆ 

11:43 PM Sep 10, 2023 | Team Udayavani |

ಮುಂಬಯಿ: ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ವೇಳೆ ಲಕ್ಷಾಂತರ ಮಂದಿ ಸೇರುವ ಕಾರಣ, ಕಾರ್ಯಕ್ರಮ ಮುಗಿಸಿ ಅವರು ವಾಪಸ್‌ ಬರುವಾಗ “ಗೋಧ್ರಾ ಮಾದರಿಯ ಘಟನೆ’ಗಳು ನಡೆಯುವ ಸಾಧ್ಯತೆಯಿದೆ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ, ಶಿವಸೇನೆ ನಾಯಕ ಉದ್ಧವ್‌ ಠಾಕ್ರೆ ಹೇಳಿದ್ದಾರೆ.

Advertisement

2002ರ ಫೆಬ್ರವರಿ 27ರಂದು ಅಯೋಧ್ಯೆಯಿಂದ ವಾಪಸಾಗುತ್ತಿದ್ದ ಕರಸೇವಕರಿದ್ದ ಸಬರಮತಿ ಎಕ್ಸ್‌ಪ್ರೆಸ್‌ ರೈಲಿನ ಬೋಗಿಗೆ ಬೆಂಕಿ ಹಚ್ಚಲಾಗಿತ್ತು. ಈ ಘಟನೆಯು ಗುಜರಾತ್‌ನಾದ್ಯಂತ ಹಿಂಸಾಚಾರ ಭುಗಿಲೇಳುವಂತೆ ಮಾಡಿತ್ತು. ಈ ಬಾರಿ ರಾಮಮಂದಿರ ಉದ್ಘಾಟನೆಯ ಕಾರ್ಯಕ್ರಮ ವೀಕ್ಷಿಸಲೆಂದು ಕೇಂದ್ರ ಸರಕಾರವು ಬಸ್‌ಗಳು ಹಾಗೂ ಟ್ರಕ್‌ಗಳಲ್ಲಿ ಲಕ್ಷಾಂತರ ಮಂದಿಯನ್ನು ಕರೆಸಿಕೊಳ್ಳುವ ಸಾಧ್ಯತೆಯಿದೆ. ಅವರೆಲ್ಲರೂ ತಮ್ಮ ತಮ್ಮ ಊರಿಗೆ ವಾಪಸಾಗುವ ವೇಳೆ ಗೋಧ್ರಾ ಮಾದರಿ ಘಟನೆ ಸಂಭವಿಸುವ ಸಾಧ್ಯತೆ ಇಲ್ಲದಿಲ್ಲ ಎಂದಿದ್ದಾರೆ ಉದ್ಧವ್‌. ಮುಂದಿನ ವರ್ಷದ ಜನವರಿಯಲ್ಲಿ ರಾಮಮಂದಿರ ಉದ್ಘಾಟನೆಯಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next