Advertisement

ಸಿದ್ದರಾಮಯ್ಯ ವಿರುದ್ಧ ಪೋಸ್ಟ್‌: ದೂರು ದಾಖಲು

11:41 PM Jun 14, 2019 | Team Udayavani |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತು ಅವಹೇಳನಕಾರಿ, ವ್ಯಕ್ತಿತ್ವ ತೇಜೋವಧೆಯಾಗುವ ಪೋಸ್ಟ್‌ವೊಂದನ್ನು ಫೇಸ್‌ಬುಕ್‌ನಲ್ಲಿ ಬರೆದ ಆರೋಪ ಸಂಬಂಧ ನಿರಂಜನ್‌ ಗೌಡ ಎಂಬುವರ ವಿರುದ್ಧ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

ಕೆಪಿಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ನಟರಾಜ್‌ ಗೌಡ ಅವರು, ನಿರಂಜನ ಗೌಡ ವಿರುದ್ಧ ಕ್ರಮ ಜರುಗಿಸುವಂತೆ ಕೋರಿ ದೂರು ನೀಡಿದ್ದಾರೆ. ಜೂನ್‌ 10ರಂದು ಹಿರಿಯ ಸಾಹಿತಿ ಗಿರೀಶ್‌ ಕಾರ್ನಾಡ್‌ ನಿಧನ ಹೊಂದಿದ್ದು, ಅದೇ ದಿನ ನಿರಂಜನ ಗೌಡ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಗಿರೀಶ್‌ ಕಾರ್ನಾಡ್‌ ಸತ್ತಿದ್ದಕ್ಕೆ ಇಷ್ಟು ಸಂಭ್ರಮ ಪಡುವ ನಾವು,

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಧನ ಹೊಂದಿದರೆ ದೀಪಾವಳಿ ಮಾಡೋಣ ಫ್ರೆಂಡ್ಸ್‌ ಎಂದು ಪೋಸ್ಟ್‌ ಹಾಕಿದ್ದು, ಅವರ ವ್ಯಕ್ತಿತ್ವದ ತೇಜೋವಧೆ ಮಾಡಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಿ ಎಂದು ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next