ಉಡುಪಿ : ತಾಂತ್ರಿಕ ಸಮಸ್ಯೆಯಿಂದಾಗಿ ದೇಶಾದ್ಯಂತ ಕಳೆದ ಕೆಲವು ದಿನಗಳಿಂದ ಅಂಚೆ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ನಗದು ವರ್ಗಾವಣೆ ಸಹಿತ ವೆಬ್ಸೈಟ್ಗಳು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲವಾಗಿದೆ.
Advertisement
ಈ ಬಗ್ಗೆ ಪ್ರತಿಕ್ರಿಯಿಸಿದ ಅಂಚೆ ಅಧೀಕ್ಷಕ ನವೀನ್ಚಂದರ್, ಮುಂಬಯಿಯಲ್ಲಿದ್ದ ಸರ್ವರ್ ಅನ್ನು ಮೈಸೂರಿಗೆ ಸ್ಥಳಾಂತರ ಮಾಡುತ್ತಿರುವ ಕಾರಣ ಈ ಸಮಸ್ಯೆ ಉಂಟಾಗಿದೆ. ಕೆಲವು ದಿನಗಳೊಳಗೆ ಈ ಪ್ರಕ್ರಿಯೆ ಪೂರ್ಣಗೊಂಡು ಎಂದಿನಂತೆ ಸೇವೆ ಸಿಗಲಿದೆ.
ಗ್ರಾಹಕರಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.