Advertisement

ಇಂದು ಇಲ್ಲವೇ ನಾಳೆ ಖಾತೆ ಹಂಚಿಕೆ

11:39 PM Aug 21, 2019 | Lakshmi GovindaRaj |

ಬೆಂಗಳೂರು: ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಉಂಟಾಗಿರುವ ಅತೃಪ್ತಿ ಶಮನವಾಗುವ ಮೊದಲೇ ಗೊಂದಲ, ಅಸಮಾಧಾನಕ್ಕೆ ಎಡೆ ಇಲ್ಲದಂತೆ ಖಾತೆ ಹಂಚಿಕೆಯಾಗಬೇಕಿದ್ದು, ಗುರುವಾರ ಇಲ್ಲವೇ ಶುಕ್ರವಾರ ಖಾತೆ ಹಂಚಿಕೆಯಾಗುವ ಸಾಧ್ಯತೆ ಇದೆ.

Advertisement

ಗೃಹ, ಲೋಕೋಪಯೋಗಿ, ಭಾರೀ ನೀರಾವರಿ, ಕಂದಾಯ, ಇಂಧನ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸೇರಿದಂತೆ ಆಯ್ದ ಖಾತೆಗಳತ್ತ ಹಲವು ಸಚಿವರು ಕಣ್ಣಿಟ್ಟಿದ್ದಾರೆ. ಇನ್ನೊಂದೆಡೆ, ಅನರ್ಹಗೊಂಡ ಶಾಸಕರಿಗೆ ಭವಿಷ್ಯದಲ್ಲಿ ಪ್ರಭಾವಿ ಖಾತೆಗಳನ್ನು ಕಾಯ್ದಿರಿಸಬೇಕಿದ್ದು, ಯಾರಿಗೂ ಅಸಮಾಧಾನವಿಲ್ಲದಂತೆ ಖಾತೆ ಹಂಚಿಕೆ ಮಾಡುವುದು ಯಡಿಯೂರಪ್ಪ ಅವರಿಗೆ ಸವಾಲಾದಂತಿದೆ.

ರಾಜ್ಯದ 22 ಜಿಲ್ಲೆಗಳ ಪ್ರವಾಹಪೀಡಿತ ಪ್ರದೇಶಗಳಲ್ಲಿ ಪರಿಹಾರ ಹಾಗೂ ಪುನರ್ವಸತಿ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಬೇಕಿದೆ. ಈ ಕಾರ್ಯಕ್ಕೆ ಪೂರಕವಾಗಿರುವ ಖಾತೆಗಳನ್ನು ಜವಾಬ್ದಾರಿಯುತ ಸಚಿವರಿಗೆ ವಹಿಸಿ, ಅಲ್ಪಾವಧಿಯಲ್ಲಿ ಕಾರ್ಯ ಸಾಧನೆ ತೋರಿಸಬೇಕಾದ ಅನಿವಾರ್ಯತೆ ಇದೆ.

ಹಾಗಾಗಿ, ಮುಖ್ಯಮಂತ್ರಿಯವರು ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ. ಈ ಕುರಿತು ಬುಧವಾರ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಗುರುವಾರ ಇಲ್ಲವೇ ಶುಕ್ರವಾರ ಖಾತೆ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next