Advertisement

ನಟ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಬಸವ ಶ್ರೀ ಪುರಸ್ಕಾರ

06:16 PM Nov 04, 2021 | Team Udayavani |

ಚಿತ್ರದುರ್ಗ: ಅಕಾಲಿಕವಾಗಿ ಅಗಲಿದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ಗೆ 2021ನೇ ಸಾಲಿನ ಮರಣೋತ್ತರ ಬಸವಶ್ರೀ ಪ್ರಶಸ್ತಿ ಘೋಷಿಸಲಾಗಿದೆ.

Advertisement

ಡಾ. ಶಿವಮೂರ್ತಿ ಮುರುಘಾ ಶರಣರು ಗುರುವಾರ ಸುದ್ದಿಗೋಷ್ಠಿ ನಡೆಸಿ ನಟ ಪುನೀತ್ ರಾಜ್ ಕುಮಾರ್ ಗೆ 2021ನೇ ಸಾಲಿನ ಮರಣೋತ್ತರ ಬಸವಶ್ರೀ ಪ್ರಶಸ್ತಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಮುರುಘಾ ಮಠದ ಅನುಭವ ಮಂಟಪದಲ್ಲಿ 2022ರಲ್ಲಿ ನಡೆವ ಬಸವ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಪುನೀತ್ ಪತ್ನಿ ಅಶ್ವಿನಿ ಅವರಿಗೆ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ನ.10ರಂದು ಬೆಂಗಳೂರಿನ ಅವರ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಬರಲಾಗುವುದು. ಪ್ರಶಸ್ತಿ ನೀಡುವ ಕುರಿತು ಈಗಾಗಲೇ ಶಿವರಾಜ್ ಕುಮಾರ್ ಜತೆ ಚರ್ಚಿಸಲಾಗಿದೆ ಎಂದು ಶ್ರೀಗಳು ತಿಳಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next