Advertisement

ಡಾ.ಶಿವಕುಮಾರ ಸ್ವಾಮೀಜಿಗೆ ಮರಣೋತ್ತರ ಭಾರತ ರತ್ನ; ಕೇಂದ್ರಕ್ಕೆ ಪತ್ರ

01:38 PM Feb 03, 2024 | Team Udayavani |

ದಾವಣಗೆರೆ : ನಾವು ರಾಜ್ಯದಿಂದ ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರಿಗೆ ಮರಣೋತ್ತರ ಭಾರತ ರತ್ನ ಕೊಡಲು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಶನಿವಾರ ಹೇಳಿಕೆ ನೀಡಿದ್ದಾರೆ.

Advertisement

ಬಿಜೆಪಿ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿಯವರಿಗೆ ಪ್ರಧಾನಿ ಮೋದಿ ಅವರು ಭಾರತ ರತ್ನ ಘೋಷಿಸಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಭಾರತ ರತ್ನ ಕೊಟ್ಟಿದ್ದಾರೆ ಕೊಡಲಿ.ನಾವು ಡಾ. ಶಿವಕುಮಾರ ಸ್ವಾಮೀಜಿಯವರಿಗೆ ಮರಣೋತ್ತರ ಭಾರತ ರತ್ನ ಕೊಡಲು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ ಎಂದರು.

ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನಿಗೆ ಬೆಳಗಾವಿ ಲೋಕಸಭೆ ಟಿಕೆಟ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ಅವರೂ ಓರ್ವ ಆಕಾಂಕ್ಷಿ. ಯಾರಾದರೂ ಟಿಕೆಟ್ ಕೇಳಬಹುದು. ಯಾರಿಗೂ ಕೇಳಬೇಡಿ ಎನ್ನಲಾಗದು. ಕಾಂಗ್ರೆಸ್ ನಲ್ಲಿ ಟಿಕೆಟ್ ಕೇಳುವವರ ಸಂಖ್ಯೆ ಹೆಚ್ಚು. ಅಂತಿಮವಾಗಿ ಸ್ಥಳೀಯ ಮುಖಂಡರು, ಕ್ಷೇತ್ರದ ಶಾಸಕರು, ಸಂಸದರು, ಎಲ್ಲ ಸೇರಿ ಚರ್ಚಿಸಿ ತೀರ್ಮನ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next