Advertisement

ಕೋವಿಡ್ ಭೀತಿ: ಬಿಜೆಪಿ ಚಿಂತನ ಸಭೆ ಮುಂದೂಡಿಕೆ

10:48 AM Jan 06, 2022 | Team Udayavani |

ಬೆಂಗಳೂರು: ರಾಜ್ಯ ಬಿಜೆಪಿ ವತಿಯಿಂದ ಜನವರಿ 7, 8 ಮತ್ತು 9 ರಂದು ನಡೆಯಬೇಕಾದ ಚಿಂತನ ವರ್ಗವನ್ನು ಕೋವಿಡ್ ಮೂರನೇ ಅಲೆಯ ತೀವ್ರಗೊಳ್ಳುತ್ತಿರುವ ಕಾರಣ ಮುಂದೂಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ನಳಿನ್‍ ಕುಮಾರ್ ಕಟೀಲ್ ತಿಳಿಸಿದ್ದಾರೆ.

Advertisement

ರಾಜ್ಯದಲ್ಲಿ ಕೋವಿಡ್ ಅಲೆ ವೇಗವಾಗಿ ಹರಡುವುದನ್ನು ಗಮನಿಸಿ ರಾಜ್ಯ ಸರ್ಕಾರ ಕೋವಿಡ್‍ನ ನಿಯಂತ್ರಿಸಲು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಸರ್ಕಾರದ ಸುತ್ತೋಲೆಯನ್ನು ಗೌರವಿಸುವುದು ಮತ್ತು ಸರ್ಕಾರದ ಕಾನೂನು ಪಾಲನೆ ಮಾಡುವುದು ಎಲ್ಲರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಚಿಂತನ ಸಭೆಯನ್ನು ಮುಂದೂಡಲಾಗಿದೆ ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಇದನ್ನೂ ಓದಿ:ಭಾರೀ ವೇಗ ಪಡೆದ ಕೋವಿಡ್: 24 ಗಂಟೆಯಲ್ಲಿ 90 ಸಾವಿರಕ್ಕೂ ಹೆಚ್ಚು ಸೋಂಕು ಪ್ರಕರಣ ಪತ್ತೆ!

Advertisement

Udayavani is now on Telegram. Click here to join our channel and stay updated with the latest news.

Next