Advertisement

India-Canada: ಭಾರತ-ಕೆನಡಾ ವ್ಯಾಪಾರ ಮಾತುಕತೆ ಮುಂದೂಡಿಕೆ

09:58 PM Sep 16, 2023 | Team Udayavani |

ನವದೆಹಲಿ: ಕೆನಡಾ ಮತ್ತು ಭಾರತ ನಡುವಿನ ವೈಮನಸ್ಸು ದಿನಕಳೆದಂತೆ ತೀವ್ರಗೊಳ್ಳುತ್ತಿದ್ದು, ಈಗ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದ ಮಾತುಕತೆಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದೆ. ಇತ್ತೀಚೆಗೆ ಜಿ20 ರಾಷ್ಟ್ರಗಳ ಸಮ್ಮೇಳನದ ವೇಳೆ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರಾಡ್ನೂ ಜತೆಗೆ ಪ್ರಧಾನಿ ನರೇಂದ್ರ ಮೋದಿ ಕಠಿಣವಾಗಿ ಕೆನಡಾದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಘಟನೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಅದರ ಬೆನ್ನಲ್ಲೇ ಕೆನಡಾ ತನ್ನ ನಿಯೋಗವನ್ನು ಭಾರತಕ್ಕೆ ಕಳುಹಿಸುವ ನಿರ್ಧಾರವನ್ನು ಮುಂದೂಡಿದೆ.

Advertisement

ಅ.9ರಿಂದ ಐದು ದಿನಗಳ ಕಾಲ ನವದೆಹಲಿಯಲ್ಲಿ ಮಾತುಕತೆಗೆ ಕೆನಡಾದ ಸಚಿವರ ಮಟ್ಟದ ನಿಯೋಗ ಆಗಮಿಸಬೇಕಾಗಿತ್ತು. ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಯಾವುದೇ ದೇಶದ ಜತೆಗೆ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದ ಮಾತುಕತೆಗಳನ್ನು ನಡೆಸುವುದಿಲ್ಲ ಎಂದು ಭಾರತದ ವಿದೇಶಾಂಗ ಸಚಿವಾಲಯ ಪ್ರಕಟಿಸಿದೆ. ಅದಕ್ಕೆ ಪೂರಕವಾಗಿ ಕೆನಡಾ ಸರ್ಕಾರದ ಮೂಲಗಳನ್ನು ಉಲ್ಲೇಖೀಸಿ ಉದ್ದೇಶಿತ ಮಾತುಕತೆ ಮುಂದೂಡಿಕೆಯಾಗಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

Advertisement

Udayavani is now on Telegram. Click here to join our channel and stay updated with the latest news.

Next