Advertisement

ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಮುಂದೂಡಿಕೆ

11:27 AM Aug 29, 2019 | Team Udayavani |

ಬೆಂಗಳೂರು: ರಾಜ್ಯ ಸರಕಾರಿ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಪ್ರಕ್ರಿಯೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತೆ ಮುಂದೂಡಿದೆ.

Advertisement

ಆ.27ರಿಂದ ನಡೆಯಬೇಕಿದ್ದ ಕಡ್ಡಾಯ ವರ್ಗಾವಣೆ ಕೌನ್ಸೆಲಿಂಗ್‌ ಪ್ರಕ್ರಿಯೆಯನ್ನು ತಾಂತ್ರಿಕ ಕಾರಣಗಳಿಗಾಗಿ ಆ.29ರಿಂದ ನಡೆಸಲು ಸೂಚಿಸಿರುವ ಇಲಾಖೆ, ಇತರ ವರ್ಗಾವಣೆಗಳನ್ನು ಅನುಗುಣವಾಗಿ ತಾತ್ಕಾಲಿಕವಾಗಿ ಮುಂದೂಡಿದೆ.

ವರ್ಗಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ವಿಸ್ತೃತವಾದ ಪರಿಷ್ಕೃತ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡ ಲಾಗುವುದು ಎಂದು ಇಲಾಖೆ ತಿಳಿಸಿದೆ. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಮೂರೂವರೆ ವರ್ಷಗಳಿಂದ ಮುಂದೂಡುತ್ತಲೇ ಬರಲಾಗಿದೆ. ಸಿಎಂ ಯಡಿಯೂರಪ್ಪ ವರ್ಗಾವಣೆ ಪ್ರಕ್ರಿಯೆ ಪುನರಾರಂಭಿಸಲು ಸೂಚಿಸಿದ್ದರು. ಇದಾದ ನಾಲ್ಕೇ ದಿನಗಳಲ್ಲಿ ಈಗ ತಾಂತ್ರಿಕ ಕಾರಣದ ನೆಪವೊಡ್ಡಿ ವರ್ಗಾವಣೆ ಪ್ರಕ್ರಿಯೆಯನ್ನು ಇಲಾಖೆ ಮತ್ತೆ ಮುಂದೂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next