Advertisement

ಶಾಸಕರ ಪುತ್ರಿ ವಿವಾಹ ಆರತಕ್ಷತೆ ಮುಂದೂಡಿಕೆ

11:42 PM Mar 14, 2020 | Lakshmi GovindaRaj |

ಚಿಕ್ಕೋಡಿ: ಬೆಳಗಾವಿ ನಗರದ ಸಿಪಿಎಡ್‌ ಮೈದಾನದಲ್ಲಿ ಮಾ.15ರಂದು ಸಂಜೆ ಹಾಗೂ 17ರಂದು ಚಿಕ್ಕೋಡಿ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಧಾನ ಪರಿಷತ್‌ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರ ಪುತ್ರಿಯ ಮದುವೆ ಸಮಾರಂಭದ ಆರತಕ್ಷತೆ ಮುಂದೂಡಲಾಗಿದೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಭಾನುವಾರ ಬೆಳಗ್ಗೆ 10 ಗಂಟೆಗೆ ಮಗಳ ಮದುವೆ ಕುಟುಂಬದವರೊಂದಿಗೆ ಸರಳವಾಗಿ ನೆರವೇರಲಿದೆ.

Advertisement

ತಮ್ಮ ಸ್ಥಳಗಳಿಂದಲೇ ವಧು-ವರರನ್ನು ಆಶೀರ್ವದಿಸಬೇಕೆಂದು ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ಸೂಚನೆ ಮೇರೆಗೆ ರಾಜ್ಯ ಸರ್ಕಾರವು ಸಾರ್ವಜನಿಕ ಹಿತದೃಷ್ಟಿಯಿಂದ ಹೆಚ್ಚು ಜನ ಸೇರುವ ಸಭೆ-ಸಮಾರಂಭಗಳನ್ನು ನಿರ್ಬಂಧಿ ಸಿದೆ. ಈ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next