Advertisement

ಬಿಎಸ್‌ವೈ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

11:47 AM Sep 19, 2017 | |

ಬೆಂಗಳೂರು: ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದುಕೊಳ್ಳದೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಎಫ್ಐಆರ್‌ ದಾಖಲಿಸಿಕೊಂಡು ಎಸಿಬಿ ತನಿಖೆ ನಡೆಸುತ್ತಿರುವುದು ಕಾನೂನುಬಾಹಿರ ಕ್ರಮವಾಗಿದೆ ಎಂದು ಹಿರಿಯ ವಕೀಲ  ಸಿ.ವಿ ನಾಗೇಶ್‌ ಹೈಕೋರ್ಟ್‌ಗೆ ಸೋಮವಾರ ತಿಳಿಸಿದರು.

Advertisement

ಎಸಿಬಿ ದಾಖಲಿಸಿರುವ ಎಫ್ಐಆರ್‌ ರದ್ದುಕೋರಿ ಮಾಜಿ ಸಿಎಂ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿವಿಚಾರಣೆಯ ವೇಳೆ ಅವರ ಪರ ವಾದಮಂಡಿಸಿದ ವಕೀಲ ಸಿ..ವಿ ನಾಗೇಶ್‌, ಯಡಿಯೂರಪ್ಪ ವಿರುದ್ಧ ಎಫ್ಐಆರ್‌ ದಾಖಲಿಸಿಕೊಳ್ಳುವ ಮೊದಲು ಎಸಿಬಿ ನಿಯಮಾವಳಿಗಳನ್ನು ಪಾಲಿಸಿಲ್ಲ. ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯದೇ ಕಾನೂನು  ಉಲ್ಲಂಘಿಸಿದ್ದಾರೆ.

ಅಲ್ಲದೆ ಡಿನೋಟಿಫಿಕೇಶನ್‌ ಮಾಡಿರುವ ಸಂಬಂಧ ಸೂಕ್ತ ದಾಖಲೆಗಳೂ ಲಭ್ಯವಾಗಿಲ್ಲ ಹೀಗಾಗಿ ಪ್ರಕರಣದ ತನಿಖೆಗೆ ತಡೆಯಾಜ್ಞೆ  ನೀಡಬೇಕು ಎಂದು ನ್ಯಾಯಪೀಠಕ್ಕೆ ಕೋರಿದರು. ವಾದ, ಪ್ರತಿವಾದ ಆಲಿಸಿದ ನ್ಯಾಯಮೂರ್ತಿ  ಅರವಿಂದಕುಮಾರ್‌ ಅವರಿದ್ದ ಏಕಸದಸ್ಯ ಪೀಠ, ವಿಚಾರಣೆಯನ್ನು ಸೆ.20ಕ್ಕೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next