Advertisement

ಅಧಿಕಾರಿಗಳ ಎದುರಿಗೆ ಆತ್ಮಹತ್ಯೆಗೆ ಯತ್ನಿಸಿದ ಪುರಸಭೆ ಪೌರ ಕಾರ್ಮಿಕ!

12:21 PM Jan 26, 2021 | Team Udayavani |

ಹುಮನಾಬಾದ್ (ಬೀದರ್): ಚಿಟಗುಪ್ಪ ಪುರಸಭೆ ಪೌರಕಾರ್ಮಿಕನೊಬ್ಬ ಅಧಿಕಾರಿಗಳ ಕಿರುಕುಳ ತಾಳಲಾರದೆ ಪುರಸಭೆ ಎದುರಿಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗಣರಾಜ್ಯೋತ್ಸವ ದಿನದಂದು ನಡೆದಿದೆ.

Advertisement

ಪುರಸಭೆಯಲ್ಲಿ ಪೌರಕಾರ್ಮಿಕನಾಗಿ ಕೆಲಸ ನಿರ್ವಹಿಸುತ್ತಿರುವ ರಾಘವೆಂದ್ರ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಕಳೆದ ಕೆಲ ತಿಂಗಳಿಂದ ಸಂಬಳಕ್ಕಾಗಿ ಮುಖ್ಯಾಧಿಕಾರಿ ಹಾಗೂ ಇತರೆ ಸಿಬ್ಬಂದಿಗಳು ಕಿರುಕುಳ ನೀಡಿದ್ದಾರೆಂದು ಆರೋಪಿಸುತ್ತಿರುವ ಬಗ್ಗೆ ಸಿಬ್ಬಂದಿಗಳು ಮಾತಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:ಕೇಂದ್ರದ ನೂತನ ಮೂರು ಕೃಷಿ ಕಾಯ್ದೆ ಮಹಾರಾಷ್ಟ್ರದಲ್ಲಿ ಜಾರಿಗೊಳಿಸಲ್ಲ: ಸ್ಪೀಕರ್ ಪಟೋಲೆ

ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಒಂದು ಕಡೇ ಸೇರಿದ ಅಧಿಕಾರಿಗಳು ಹಾಗೂ ಆಡಳಿತ ಸಿಬ್ಬಂದಿಗಳ ಸಮುಖದಲ್ಲಿ ಈ ಘಟನೆ ನಡೆದಿದೆ.  ಘಟನೆಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next