Advertisement

ಸಂಪುಟ ಸಭೆಯಲ್ಲಿ ಪವರ್‌ ಕಟ್‌

06:30 AM Oct 26, 2018 | |

ಬೆಂಗಳೂರು: ಸಚಿವ ಸಂಪುಟ ಸಭೆಯ ನಂತರ ಸಚಿವ ಬಂಡೆಪ್ಪ ಕಾಂಶಪೂರ್‌ ಪತ್ರಿಕಾಗೋಷ್ಠಿ ನಡೆಸುತ್ತಿದ್ದ ಸಂದರ್ಭದಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡು ಸಚಿವರಿಗೆ ಮುಜುಗರ ಉಂಟು ಮಾಡಿತು.

Advertisement

ಅದಕ್ಕೂ ಮೊದಲು ಮುಖ್ಯಮಂತ್ರಿ ಕುಮಾರಸ್ವಾಮಿ ಇಂಧನ ಇಲಾಖೆ ಅಧಿಕಾರಿಗಳ ಸಭೆ ನಡೆಸಿ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲೋಡ್‌ ಶೆಡ್ಡಿಂಗ್‌ ಮಾಡುವುದಿಲ್ಲ. ಮಾಧ್ಯಮಗಳು ಜವಾಬ್ದಾರಿಯಿಂದ ವರದಿ ಮಾಡಬೇಕೆಂದು ಖಾರವಾಗಿಯೇ ಮಾತನಾಡಿದ್ದರು.

ಆದರೆ, ಸಚಿವರು ವಿಧಾನಸೌಧದ ಮೂರನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸುತ್ತಿರುವಾಗಲೇ ವಿದ್ಯುತ್‌ ಕೈ ಕೊಟ್ಟಿದ್ದು, ಸಚಿವರಿಗೆ ಮುಜುಗರ ಉಂಟು ಮಾಡಿತು.

ಸಚಿವರು ಗೈರು: ರಾಜ್ಯದಲ್ಲಿ ಉಪ ಚುನಾವಣೆ ನಡೆಯುತ್ತಿರುವುದರಿಂದ ಸಚಿವ ಸಂಪುಟ ಸಭೆಗೆ ಅರ್ಧಕ್ಕೂ ಹೆಚ್ಚು ಸಚಿವರು ಗೈರು ಹಾಜರಾಗಿದ್ದರು. ಸರ್ಕಾರ ಬಹುತೇಕ ಸಚಿವರಿಗೆ ಐದು ಕ್ಷೇತ್ರಗಳಲ್ಲಿ ಚುನಾವಣಾ ಉಸ್ತುವಾರಿಯನ್ನಾಗಿ
ನೇಮಿಸಿರುವುದರಿಂದ ಗುರುವಾರ ನಡೆದ ಸಚಿವ ಸಂಪುಟ ಸಭೆಯಿಂದ ಬಹುತೇಕ ಸಚಿವರು ದೂರ ಉಳಿದಿದ್ದರು. ಪ್ರಮುಖ ಸಚಿವರಾದ ಡಿ.ಕೆ.ಶಿವಕುಮಾರ್‌, ಪ್ರಿಯಾಂಕ್‌ ಖರ್ಗೆ, ಶಿವಾನಂದ ಪಾಟೀಲ್‌,ಜಮೀರ್‌ ಅಹಮದ್‌, ಕೃಷ್ಣ ಬೈರೇಗೌಡ ಸೇರಿದಂತೆ ಅರ್ಧಕ್ಕೂ ಹೆಚ್ಚು ಸಂಪುಟದ ಸಚಿವರು ಗೈರು ಹಾಜರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next