Advertisement

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

11:29 AM May 21, 2024 | Team Udayavani |

ಚಿತ್ರದುರ್ಗ: ಕಳೆದ 3 ದಿನಗಳಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಸುರಿದ ಹಿನ್ನಲೆಯಲ್ಲಿ ಜಿಲ್ಲೆಯ ಹಲವೆಡೆ ವಿದ್ಯುತ್ ಸಂಪರ್ಕ ಕಡಿತ, ಜನ ಜೀವನ ಅಸ್ತವ್ಯಸ್ತ ಉಂಟಾಗಿದೆ.

Advertisement

ಮಳೆಯ ಹಿನ್ನಲ್ಲೆಯಲ್ಲಿ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮೊಬೈಲ್ ಬ್ಯಾಟರಿಯಲ್ಲಿಯೇ ರೋಗಿಗೆ ವೈದ್ಯರು ಚಿಕಿತ್ಸೆ ನೀಡಿದ್ದಾರೆ.

ಆಸ್ಪತ್ರೆಯ ಜನರೇಟರ್ ಕೆಟ್ಟು ವಾರ ಕಳೆದರೂ ಜಿಲ್ಲಾಡಳಿತ ಅದನ್ನು ರಿಪೇರಿ ಮಾಡಿದೆ ತಾಲ್ಲೂಕು ಆಸ್ಪತ್ರೆಯಲ್ಲಿ ಅವ್ಯವಸ್ಥೆ ಉಂಟಾಗಿದೆ.

ವಿದ್ಯುತ್ ವ್ಯತ್ಯಯವಾಗಿ ಬೆಳಕಿಲ್ಲದೆ, ಆಸ್ಪತ್ರೆಯಲ್ಲಿ  ರೋಗಿಗಳ ಯಾತನೆಯನ್ನು ಅನುಭವಿಸುತ್ತಿದ್ದಾರೆ. ಬೆಳಗ್ಗೆ 9 ಗಂಟೆವರೆಗೂ ವಿದ್ಯುತ್ ಇಲ್ಲ, ಜನರೇಟರ್ ಆಗದ ಕಾರಣ ಆಸ್ಪತ್ರೆ ಆಡಳಿತದ ವಿರುದ್ದ ಸಾರ್ವಜನಿಕರ ಹಿಡಿಶಾಪ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next