Advertisement

Power problem; ಹಿಂದಿನ ಸರ್ಕಾರವೇ ಕಾರಣ ಎಂದ ಸಚಿವ ಆರ್.ಬಿ.ತಿಮ್ಮಾಪುರ

08:09 PM Aug 31, 2023 | Team Udayavani |

ಮುಧೋಳ : ಹಿಂದಿನ ಸರ್ಕಾರದ ಅವಧಿಯಲ್ಲಿ ವಿದ್ಯುತ್ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳದ ಕಾರಣ ಇಂದು ನಮಗೆ ಹೆಚ್ಚಿನ ಸಮಸ್ಯೆಯಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.

Advertisement

ಸಮೀಪದ ಶಿರೋಳ ಗ್ರಾಮದಲ್ಲಿ ಸಾರ್ವಜನಿಕ ಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಅನೇಕ ಕಡೆಗಳಲ್ಲಿ ಸಮಪರ್ಕ ವಿದ್ಯುತ್ ಪೂರೈಕೆಗಾಗ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಬರಗಾಲದ ಮುನ್ಸೂಚನೆ ಕಾರಣ ಅನೇಕ ಜಲಾಶಯದಲ್ಲಿ ನೀರಿನ ಪ್ರಮಾಣ ತಗ್ಗಿ ವಿದ್ಯುತ್ ಉತ್ಪಾದನೆ ಕುಂಠಿತಗೊಂಡಿದೆ. ಸಮಪರ್ಕ ವಿದ್ಯುತ್ ಪೂರೈಕೆಗಾಗಿ ನಾವು ಪ್ರತಿ ಯೂನಿಟ್ ಗೆ 10 ರೂ. ವ್ಯಯಿಸಿ ವಿದ್ಯುತ್ ಖರೀದಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದರು.

ಎಷ್ಟೇ ಕಷ್ಟವಾದರೂ ರೈತರಿಗೆ ಗುಣಮಟ್ಟದ ವಿದ್ಯುತ್ ನೀಡುವುದು ನಮ್ಮ ಗುರಿ. ರೈತರು ಸಹ ಸರ್ಕಾರದೊಂದಿಗೆ ಸಹಕಾರದಿಂದ ನಡದುಕೊಳ್ಳಬೇಕು ಎಂದು ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next