Advertisement

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

12:49 PM Jan 21, 2022 | Team Udayavani |

ಬೆಂಗಳೂರು: ಇವತ್ತಿನ ಸಂದರ್ಭದಲ್ಲಿ ವಿದ್ಯುತ್ ದರ ಏರಿಕೆ ಅನಿವಾರ್ಯ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಶುಕ್ರವಾರ ಹೇಳಿಕೆ ನೀಡಿದ್ದಾರೆ.

Advertisement

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಾವು ಕೆಲವೊಂದಿಷ್ಟು ಯೋಜನೆ ಕೈಗೆತ್ತಿಕೊಳ್ಳುತ್ತಿದ್ದೇವೆ.
12 ಸಾವಿರ ಕೋಟಿಯಷ್ಟು ಬೇರೆ ಬೇರೆ ಇಲಾಖೆಯಿಂದ ಹಣ ಬರಬೇಕಾಗಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ, ನೀರಾವರಿ ಇಲಾಖೆ, ಬಿಡಬ್ಲ್ಯೂಎಸ್ಎಸ್ಬಿ ಸೇರಿ ಹಲವು ಇಲಾಖೆಗಳಿಂದ ಹಣ ಬಾಕಿ ಬರುವುದು ಬಾಕಿ ಇದೆ ಎಂದು ತಿಳಿಸಿದರು.

ಕೆಇಆರ್ ಸಿ – ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗ ಶಿಫಾರಸು ಮಾಡಿದರೆ ದರ ಏರಿಕೆ ಮಾಡುವುದು ಅನಿವಾರ್ಯ. ಮೊದಲು, ಅವರು ವರದಿ ಕೊಡಲಿ. ವರದಿ ಕೊಟ್ಟ ಬಳಿಕ ವಿದ್ಯುತ್ ದರ ಏರಿಕೆಗೆ ನಿರ್ಧರಿಸುತ್ತೇವೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next