Advertisement

Pigeon Rescued: ವಿದ್ಯುತ್ ಲೈನ್ ನಲ್ಲಿ ಸಿಲುಕಿದ ಪಾರಿವಾಳ ರಕ್ಷಿಸಿದ ಪವರ್‌ಮ್ಯಾನ್

01:21 PM Sep 02, 2023 | Team Udayavani |

ಕಡಬ: ವಿದ್ಯುತ್ ತಂತಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಪಾರಿವಾಳವೊಂದನ್ನು ಪವರ್‌ಮ್ಯಾನ್ ಒಬ್ಬರು ರಕ್ಷಣೆ ಮಾಡಿ ಮಾನವೀಯತೆ ಮೆರೆದ ಘಟನೆ ಸೆ.2ರ ಶನಿವಾರ ಬೆಳಗ್ಗೆ ಪೇಟೆಯಲ್ಲಿ ನಡೆದಿದೆ.

Advertisement

ಕಡಬ ಸಿಟಿ ಫೀಡರ್ ಪವರ್‌ಮ್ಯಾನ್ ಆಗಿರುವ ಪಿ.ಜೆ. ಗುರುಮೂರ್ತಿ ಎಂಬವರು ಪಾರಿವಾಳವನ್ನು ರಕ್ಷಣೆ ಮಾಡಿ ಮಾನವೀಯತೆ ತೋರಿಸಿದವರು.

ಇಂದು ಬೆಳಗ್ಗೆ ಕಡಬ ಪೇಟೆಯಲ್ಲಿ ಸುಮಾರು ಒಂದುವರೆ ಗಂಟೆಗಳ ಕಾಲ ಪಾರಿವಾಳವೊಂದರ ಕಾಲಿಗೆ ಪ್ಲಾಸ್ಟಿಕ್ ಹಗ್ಗವೊಂದು ತಗುಲಿ ನಂತರ ಆ ಪಾರಿವಾಳ ವಿದ್ಯುತ್ ತಂತಿಯಲ್ಲಿ ಸಿಲುಕಿತ್ತು.

ಈ ವೇಳೆ ಪ್ಲಾಸ್ಟಿಕ್ ಹಗ್ಗ ಪಾರಿವಾಳದ ಕಾಲಿಗೆ ಸುತ್ತಿ ವಿದ್ಯುತ್ ತಂತಿಯಲ್ಲಿ  ಸಂಕಷ್ಟಕ್ಕೆ ಸಿಲುಕಿ ಒದ್ದಾಡುತ್ತಿತ್ತು. ತಕ್ಷಣ ಸ್ಥಳೀಯರು ಪವರ್ ಮ್ಯಾನ್ ಗಮನಕ್ಕೆ ತಂದರು.

ಆ ಕೂಡಲೇ ಕಾರ್ಯಪ್ರವೃತ್ತರಾದ ಪವರ್‌ ಮ್ಯಾನ್‌ ವಿದ್ಯುತ್ ಸಂಪರ್ಕ ಬಂದ್ ಮಾಡಿ ಸ್ಥಳಕ್ಕೆ ಬಂದು ಕಂಬವೇರಿ ಬಾಯಿಂದಲೇ ಕಚ್ಚಿ ಹಿಡಿದುಕೊಂಡು  ಪಾರಿವಾಳವನ್ನು ರಕ್ಷಣೆ ಮಾಡಿ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ಪಡೆದರು. ಸ್ಥಳೀಯರಾದ ಗೋಪಾಲ್ ನಾಯಕ್ ಮೇಲಿನಮನೆ, ನಾಗೇಶ್ ಇತರರು ಸಹಕರಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next