Advertisement

ಉಡುಪಿ: ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ರಾಧಾಕೃಷ್ಣ ನಿಧನ

08:17 PM Aug 31, 2022 | Team Udayavani |

ಉಡುಪಿ: ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ರಾಧಾಕೃಷ್ಣ ಆಚಾರ್ಯ ಇಂದು (ಆ.31 ರಂದು) ನಿಧನರಾಗಿದ್ದಾರೆ.

Advertisement

ಪೂರ್ಣಪ್ರಜ್ಞ ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗದ ಅಧ್ಯಾಪಕರು ಹಾಗೂ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದ ಅವರು,  ಆನಂತರ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾಗಿಯೂ ಸೇವೆ ಸಲ್ಲಿಸಿದ್ದರು.

ತನ್ನ ನಿವೃತ್ತ ಜೀವನದಲ್ಲಿ ಇವರು ಅನೇಕ ಸಂಘ-ಸಂಸ್ಥೆಗಳಲ್ಲಿ ಅವಿವರತವಾಗಿ ತನ್ನನ್ನು ತೊಡಗಿಸಿಕೊಂಡವರು. ಶ್ರೀ ಶ್ರೀ ವಿಬುಧೇಶತೀರ್ಥ ಶ್ರೀಪಾದರ ಒಡನಾಡಿಯಾಗಿ, ನಿವೃತ್ತ ಜೀವನದ ನಂತರವೂ ಪೂರ್ಣಪ್ರಜ್ಞ ವಿದ್ಯಾಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು.

ಸುಮಾರು 15 ವರ್ಷಗಳಿಂದ ಶ್ರೀ ಅದಮಾರು ಮಠ ಗೆಸ್ಟ್ ಹೌಸ್, ಶ್ರೀ ವಿಬುಧೇಶತೀರ್ಥ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್  ನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದವರು. ಶ್ರೀ ಶ್ರೀ ವಿಬುಧೇಶತೀರ್ಥ ಶ್ರೀಪಾದರು, ಶ್ರೀ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು, ಪ್ರಸ್ತುತ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರ  ಅವಧಿಯಲ್ಲಿಯೂ  ಟ್ರಸ್ಟಿನ ಉಪಾಧ್ಯಕ್ಷರಾಗಿ ತಮ್ಮ ಸಲಹೆ ಸೂಚನೆಗಳನ್ನು ನೀಡುತ್ತಿದ್ದು, ಶ್ರೀಪಾದತ್ರಯರಿಗೆ ಆಪ್ತರಾಗಿದ್ದರು.

ಸಾಮಾಜಿಕವಾಗಿ ತೊಡಗಿಸಿಕೊಂಡಿದ್ದ ಸರಳ ಸ್ವಭಾವದ ಶ್ರೀ ರಾಧಕೃಷ್ಣ ಆಚಾರ್ಯರ ಅಗಲಿಕೆ ಸಮಾಜಕ್ಕೆ ಬಹುದೊಡ್ಡ ನಷ್ಟ. ಅಗಲಿದ ಸರಳ ಸಜ್ಜನಿಕೆಯ ಮೂರ್ತಸ್ವರೂಪರಾದ ಶ್ರೀ ರಾಧಕೃಷ್ಣ ಆಚಾರ್ಯ ಇವರ ದಿವ್ಯಾತ್ಮಕ್ಕೆ ಸದ್ಗತಿ ಸಿಗಲೆಂದು ಶ್ರೀ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗೂ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಶ್ರೀಕೃಷ್ಣ ಮುಖ್ಯಪ್ರಾಣ ದೇವರಲ್ಲಿ ಪ್ರಾರ್ಥಿಸಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next